ಒಂದ್ಸಾರಿ ಸೋತಿದ್ದಕ್ಕೆ ಡಿಸಿಎಂ, ಇನ್ನೊಂದು ಬಾರಿ ಸೋತ್ರೆ ಸಿಎಂ ಆಗಲಿದ್ದೀರಿ- ತಂಗಡಗಿ

ಕೊಪ್ಪಳ: ಜಿಲ್ಲಾ ಉಸ್ತುವಾರಿ ಮಂತ್ರಿ, ರಾಜ್ಯದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿರುದ್ಧ ಮಾಜಿ ಸಚಿವ ಶಿವರಾಜ್ ತಂಗಡಗಿ ಹರಿಹಾಯ್ದಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಕ್ಷ್ಮಣ ಸವದಿ ಅವರು ಒಂದು ಸಾರಿ ಸೋತಿದ್ದಕ್ಕೆ ಉಪಮುಖ್ಯಮಂತ್ರಿ ಆಗಿದ್ದಾರೆ ಇನ್ನೊಂದು ಬಾರಿ ಸೋತ್ರೆ ಈ ರಾಜ್ಯದ ಮುಖ್ಯಮಂತ್ರಿ ಆಗಬಹುದು ಎಂದು ವ್ಯಂಗ್ಯವಾಡಿದರು.

ಇತ್ತೀಚೆಗಷ್ಟೇ ಕೊಪ್ಪಳಕ್ಕೆ ಆಗಮಿಸಿದ್ದ ಲಕ್ಷ್ಮಣ ಸವದಿ, ತಂಗಡಗಿ ವಿರುದ್ಧ ಹೇಳಿಕೆಯೊಂದನ್ನು ನೀಡಿದ್ದರು. ತಂಗಡಗಿ ಚುನಾವಣೆಯಲ್ಲಿ ಸೋತ ನಂತರ ತನ್ನ ಸ್ಥಿಮಿತವನ್ನು ಕಳೆದುಕೊಂಡಿದ್ದಾರೆ. ಹಾಗಾಗಿ ಏನೇನೋ ಮಾತಾಡುತ್ತಿದ್ದಾರೆ ಅವರಿಗೆ ಮೋದಿಯನ್ನು ಬೈದರೆ ಪ್ರಚಾರ ಸಿಗುತ್ತದೆ. ಹೀಗಾಗಿ ಮೋದಿಯನ್ನು ಅವರು ಬೈದು ಪ್ರಚಾರ ಗಿಟ್ಟಿಸಿ ಕೊಳ್ಳುತ್ತಾರೆ ಎಂದು ವ್ಯಂಗ್ಯ ಮಾಡಿದ್ರು.

ಸವದಿ ಅವರ ಈ ಹೇಳಿಕೆಗೆ ಮಾಜಿ ಸಚಿವ ಶಿವರಾಜ್ ತಂಗಡಗಿ ಇದೀಗ ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಲಕ್ಷ್ಮಣ ಸವದಿ ಸ್ಥಿತಿ ಅಲ್ಪನಿಗೆ ಐಶ್ವರ್ಯ ಬಂದಂತಾಗಿದೆ: ರೇಣುಕಾಚಾರ್ಯ ಕಿಡಿ

Comments

Leave a Reply

Your email address will not be published. Required fields are marked *