ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸಕ್ಕೆ ಮತ್ತೋರ್ವ ಟ್ರಕ್ ಚಾಲಕ ಬಲಿ

ಶ್ರೀನಗರ: ಕಣಿವೆ ರಾಜ್ಯದಲ್ಲಿ ಉಗ್ರರ ಅಟ್ಟಹಾಸ ದಿನೇ ದಿನೇ ಹೆಚ್ಚಾಗುತ್ತಲಿದೆ. ಉಗ್ರರ ದಾಳಿಗೆ ದಕ್ಷಿಣ ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯ ಬಿಜ್‍ಬೆಹರಾದಲ್ಲಿ ಮತ್ತೋರ್ವ ಟ್ರಕ್ ಚಾಲಕ ಬಲಿಯಾಗಿದ್ದಾನೆ.

ಉಧಮ್‍ಪುರ ಜಿಲ್ಲೆಯ ಕಾತ್ರಾ ಪ್ರದೇಶದ ಚಾಲಕ ನಾರಾಯಣ್ ದತ್ ಮೃತ ದುರ್ದೈವಿ. ಸೋಮವಾರ ಸಂಜೆ ಈ ಘಟನೆ ನಡೆದಿದೆ. ಟ್ರಕ್ ಚಾಲಕನನ್ನು ಉಗ್ರರು ಗುಂಡಿಕ್ಕಿ ಅಮಾನುಷವಾಗಿ ಕೊಲೆಗೈದಿದ್ದಾರೆ. ಈ ವಿಷಯ ತಿಳಿದ ಕೂಡಲೇ ಸ್ಥಳೀಯ ಪೊಲೀಸ್ ಅಧಿಕಾರಿ ಸ್ಥಳಕ್ಕೆ ಧಾವಿಸಿದ್ದು, ಸುತ್ತಮುತ್ತಲ ಪ್ರದೇಶದಲ್ಲಿದ್ದ ಬೇರೆ ರಾಜ್ಯದ ಇನ್ನಿಬ್ಬರು ಟ್ರಕ್ ಚಾಲಕರನ್ನು ರಕ್ಷಿಸಿದ್ದಾರೆ. ಇದನ್ನೂ ಓದಿ:ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ – ಗುಂಡಿಕ್ಕಿ ಇಬ್ಬರು ಟ್ರಕ್ ಚಾಲಕರ ಹತ್ಯೆ

ಕಳೆದು 2 ವಾರಗಳಿಂದ ಕಾಶ್ಮೀರದಲ್ಲಿ ಹೊರ ರಾಜ್ಯದಿಂದ ಬಂದ ಟ್ರಕ್ ಚಾಲಕರನ್ನೇ ಉಗ್ರರು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ. ಕಾಶ್ಮೀರದ ವಸ್ತುಗಳು ಇಲ್ಲಿನ ಗಡಿದಾಟಿ ಹೋಗಬಾರದು, ಹೊರ ರಾಜ್ಯದಿಂದ ಕಾಶ್ಮೀರಕ್ಕೆ ಬರುವವರಲ್ಲಿ ಭಯ ಹುಟ್ಟಿಸಬೇಕೆಂದು ಉಗ್ರರು ಅಟ್ಟಹಾಸ ಮೆರೆಯುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ:ಕಾಶ್ಮೀರದಲ್ಲಿ 2 ಸರ್ಕಾರಿ ಶಾಲೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ದಕ್ಷಿಣ ಕಾಶ್ಮೀರದಲ್ಲಿ ಕಳೆದ 2 ವಾರಗಳಿಂದ ಈ ದಾಳಿಯನ್ನು ಸೇರಿ 6 ಮಂದಿ ಟ್ರಕ್ ಚಾಲಕರನ್ನು ಉಗ್ರರು ಹತ್ಯೆಗೈದಿದ್ದಾರೆ. ಅದರಲ್ಲೂ ಉಗ್ರರು ಗುಂಡಿಕ್ಕಿ ಕೊಂದ ಚಾಲಕರೆಲ್ಲರೂ ಬೇರೆ ರಾಜ್ಯಗಳಿಂದ ಕಾಶ್ಮೀರಕ್ಕೆ ಬಂದವರೇ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಭಾನುವಾರ ಹೊರ ರಾಜ್ಯಗಳ ಟ್ರಕ್ ಚಾಲಕರನ್ನು ಶೋಫಿಯಾನ್ ನಗರದಿಂದ ಹೊರ ಕಳುಹಿಸಲು ಮುಂದಾಗಿದ್ದರು. ಇದೇ ಬೆನ್ನಲ್ಲೆ ಈಗ ಮತ್ತೆ ಉಗ್ರರು ಓರ್ವ ಚಾಲಕನನ್ನು ಕೊಲೆ ಮಾಡಿರುವುದು ಕಾಶ್ಮೀರದಲ್ಲಿ ಆತಂಕದ ವಾತಾವರಣ ನಿರ್ಮಿಸಿದೆ.

Comments

Leave a Reply

Your email address will not be published. Required fields are marked *