ಯಾರ ಜೊತೆಗೂ ಹೊಂದಾಣಿಕೆ ಮಾಡಿಕೊಳ್ಳಲ್ಲ- ಬಿಎಸ್‍ವೈ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಸಾಫ್ಟ್ ಕಾರ್ನರ್ ಆಗಿದ್ದು, ಇದೀಗ ಹಲವು ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿದೆ. ಆದರೆ ಇತ್ತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾತ್ರ ಯಾರ ಜೊತೆಗೂ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 100 ದಿನವಾದ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿಯ ನೇರ ಸಂದರ್ಶನದಲ್ಲಿ ಮಾತನಾಡಿದ ಸಿಎಂ, ನನಗೆ ಯಾರೂ ಶತ್ರುಗಳಿಲ್ಲ. ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷವಾಗಿ ಎಲ್ಲರ ಹಿತ ಕಾಯಬೇಕು. ಎಲ್ಲರ ಪರವಾಗಿ ಕೆಲಸ ಮಾಡಬೇಕು. ಅದು ನನ್ನ ಕರ್ತವ್ಯವಾಗಿದ್ದು, ನಾನು ಮಾಡುತ್ತಿದ್ದೇನೆ ಎಂದರು.

ವಿರೋಧ ಪಕ್ಷವಾಗಿ ಸಂದರ್ಭಕ್ಕೆ ಅನುಕೂಲಕರವಾಗಿ ಅವರವರದ್ದೇ ಆದಂತಹ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಾರೆ. ಅದಕ್ಕೆ ನಾವು ವಿರೋಧ ಮಾಡಲು ಆಗಲ್ಲ ಎಂದು ತಿಳಿಸಿದರು.

ಜೆಡಿಎಸ್ ಜೊತೆ ಮುಂದೆ ಹೊಂದಾಣಿಕೆ ಮಾಡಿಕೊಳ್ಳಲ್ಲ ಎಂಬುದನ್ನು ಜನ ಹೇಗೆ ನಂಬಬೇಕು ಅನ್ನೋ ಪ್ರಶ್ನೆಗೆ ಉತ್ತರಿಸಿದ ಸಿಎಂ, ಯಾರ ಜೊತೆಗೂ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆ ಇಲ್ಲ. ಡಿಸೆಂಬರ್ 9ರ ಫಲಿತಾಂಶ ಬಂದ ಬಳಿಕ ನಾನು ಯಾವ ರೀತಿ ಮುಂದೆ ಹೆಜ್ಜೆ ಇಡುತ್ತೇನೆ ಎಂದು ನಿಮಗೇ ಅರ್ಥವಾಗುತ್ತದೆ ಎಂದರು.

Comments

Leave a Reply

Your email address will not be published. Required fields are marked *