ಗೋರಿಪಾಳ್ಯದಲ್ಲಿ ಸ್ವಯಂ ಪ್ರೇರಿತವಾಗಿ ವ್ಯಾಪಾರಿಗಳಿಂದ ಅಂಗಡಿಗಳು ಬಂದ್

ಬೆಂಗಳೂರು: ಅಯೋಧ್ಯೆ ತೀರ್ಪು ಇಂದು ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಗೋರಿಪಾಳ್ಯದಲ್ಲಿ ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ಬಂದ್ ಮಾಡಲಾಗಿದೆ.

ಈ ಸಮಯಕ್ಕೆ ಗೋರಿಪಾಳ್ಯದಲ್ಲಿ ಎಂದಿನಂತೆ ಅಂಗಡಿಗಳು ಓಪನ್ ಮಾಡಲಾಗುತ್ತೆ. ಆದರೆ ಇಂದು ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಮಾಡಲಾಗಿದೆ. ಚಾಮರಾಮಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನಸಂಖ್ಯೆ ವಿರಳವಾಗಿದೆ.

ಗೋರಿಪಾಳ್ಯ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಬಹುತೇಕ ಅಂಗಡಿ ಮುಗ್ಗಟ್ಟುಗಳು ಇನ್ನೂ ಓಪನ್ ಆಗಿಲ್ಲ. ಮತ್ತೆ ಕೆಲವು ಮಂದಿ ಹತ್ತು ಗಂಟೆಯ ನಂತರ ಪರಿಸ್ಥಿತಿ ನೋಡಿಕೊಂಡು ಅಂಗಡಿ ತೆರೆಯಲು ನಿರ್ಧರಿಸಿದ್ದಾರೆ.

ವ್ಯಾಪಾರಿಗಳು ಮಾರ್ಕೆಟ್ ಏರಿಯಾಗಳಲ್ಲಿ ಎಂದಿನಂತೆ ಅಂಗಡಿ ಓಪನ್ ಮಾಡಿದ್ದಾರೆ.

Comments

Leave a Reply

Your email address will not be published. Required fields are marked *