ಮಾಜಿ ಸಚಿವರ ಕಾರು ಡಿಕ್ಕಿ – ನರಳಿ ನರಳಿ ಪ್ರಾಣತೆತ್ತ ಬೈಕ್ ಸವಾರ

ಬೆಂಗಳೂರು: ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಒಡೆತನದ ಕಾರು ಬೈಕಿಗೆ ಡಿಕ್ಕಿ ಹೊಡೆದು ಸವಾರ ನರಳಿ ನರಳಿ ಸಾವನ್ನಪ್ಪಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.

ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಜಿಂದಾಲ್ ಕಾರ್ಖಾನೆ ಬಳಿ ಶಾಮನೂರು ಶಿವಶಂಕರಪ್ಪ ಒಡೆತನದ ಬಿಎಂಡಬ್ಲ್ಯೂ ಕಾರು ಮತ್ತು ಬೈಕ್ ನಡುವೆ ಅಪಘಾತವಾಗಿದೆ. ಈ ಅಪಘಾತದಲ್ಲಿ ಬೈಕ್ ಸವಾರ ರಕ್ತದ ಮಡುವಲ್ಲಿ ಬಿದ್ದು ನರಳಾಡುತ್ತಿದ್ದರೂ ಕ್ಯಾರೇ ಎನ್ನದ ಕಾರು ಚಾಲಕ ಅಮಾನವೀಯತೆ ಮೆರೆದಿದ್ದಾನೆ.

ಕಾರು ಡಿಕ್ಕಿ ಹೊಡೆದು ತಲೆಗೆ ತೀವ್ರವಾಗಿ ಗಾಯವಾಗಿದ್ದ ಕಾರಣ ಬೈಕ್ ಸವಾರ ನರಳಿ ನರಳಿ ಸಾವನ್ನಪ್ಪಿದ್ದಾನೆ. ಈ ಕಾರಿನಲ್ಲಿ ಶಾಮನೂರು ಶಿವಶಂಕರಪ್ಪ ಮಗ ಗಣೇಶ್ ಪ್ರಯಾಣಿಸುತ್ತಿದ್ದ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಕಾರು ತುಮಕೂರು ಕಡೆಯಿಂದ ಬೆಂಗಳೂರಿಗೆ ಹೋಗುತಿತ್ತು. ಈ ಅಪಘಾತ ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Comments

Leave a Reply

Your email address will not be published. Required fields are marked *