ಸರ್ಕಾರಿ ಬಸ್, ಬೈಕ್ ನಡುವೆ ಅಪಘಾತ- ಶಿಕ್ಷಕರಿಬ್ಬರು ಸಾವು

ಕೊಪ್ಪಳ: ಬೈಕ್ ಮತ್ತು ಸರ್ಕಾರ ಬಸ್ ನಡುವೆ ಅಪಘಾತ ಸಂಭವಿಸಿ ಶಿಕ್ಷಕರಿಬ್ಬರು ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಬಳಿ ನಡೆದಿದೆ.

ಗುರುವಾರ ರಾತ್ರಿ ಈ ಅವಘಡ ನಡೆದಿದ್ದು, ಶಿಕ್ಷಕಿ ನಿಖಿತ್ ಬೇಗಂ(35) ಮಹ್ಮದ್ ಸಲಾವುದ್ದೀನ್(45) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮಹಮ್ಮದ್ ಸಲಾವುದ್ದೀನ್ ಬೀದರ್ ಮೂಲದವರಾಗಿದ್ದು, ಗಂಗಾವತಿಯ ಸಿಪಿಎಸ್ ಸರ್ಕಾರಿ ಉರ್ದು ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ನಿಖಿತ್ ಬೇಗಂ ಅವರು ಚಿತ್ರದುರ್ಗ ಮೂಲದವರಾಗಿದ್ದು, ಇವರು ಗಂಗಾವತಿಯ ಹೀರೆಜಂತಕಲ್ ಸರ್ಕಾರಿ ಉರ್ದು ಶಾಲೆಯ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.

ರಾತ್ರಿ ಆನೆಗುಂದಿಯಲ್ಲಿ ತರಬೇತಿ ಮುಗಿಸಿಕೊಂಡು ಬೈಕ್‍ನಲ್ಲಿ ಇಬ್ಬರೂ ಗಂಗಾವತಿಗೆ ಹಿಂದಿರುಗಿ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಎದುರಿನಿಂದ ಬಂದ ಸರ್ಕಾರಿ ಬಸ್ ಹಾಗೂ ಶಿಕ್ಷಕರ ಬೈಕ್ ನಡುವೆ ಅಪಘಾತವಾಗಿದ್ದು, ಶಿಕ್ಷಕರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಈ ಸಂಬಂಧ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *