50 ಮಕ್ಕಳಿದ್ದ ಬಸ್ ಪಲ್ಟಿ- ತಪ್ಪಿದ ಭಾರೀ ಅನಾಹುತ

– ಬೆಳಗಾವಿಯಿಂದ ಬಂದಿದ್ದ ಶಾಲಾ ಪ್ರವಾಸದ ಬಸ್

ಮಂಗಳೂರು: ಕಾರು ಹಾಗೂ 50 ಮಕ್ಕಳಿದ್ದ ಶಾಲಾ ಪ್ರವಾಸದ ಬಸ್‍ ಡಿಕ್ಕಿ ಹೊಡೆದು ಭಾರೀ ಅನಾಹುತ ತಪ್ಪಿದ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿಯ ಕೌಕ್ರಾಡಿ ಎಂಬಲ್ಲಿ ನಡೆದಿದೆ.

ಬಸ್ ಪಲ್ಟಿ ಹೊಡೆದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯಲ್ಲಿ 15 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಬೆಳಗಾವಿಯ ಜಿಲ್ಲೆಯ 50 ಜನ ಶಾಲಾ ಮಕ್ಕಳು ಬಸ್ ನಲ್ಲಿ ರಾಜ್ಯದ ಕರಾವಳಿ ಪ್ರವಾಸಕ್ಕೆ ಬಂದಿದ್ದರು. ಶುಕ್ರವಾರ ಮಂಗಳೂರಿನ ವಿವಿಧ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿದ್ದರು. ಬಳಿಕ ಕೌಕ್ರಾಡಿ ಗ್ರಾಮದ ತಿರುವಿನಲ್ಲಿ ಸಾಗುತ್ತಿದ್ದಾಗ ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಬಸ್ ಚಾಲಕ ಯತ್ನಿಸಿದ್ದ. ಆದರೆ ಚಾಲಕರ ನಿಯಂತ್ರಣ ತಪ್ಪಿದ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದಿವೆ‌.

ತಮಿಳುನಾಡು ನೋಂದಣಿಯ ಹ್ಯುಂಡೈ ಕಾರ್ ನಲ್ಲಿದ್ದ ಪ್ರಯಾಣಿಕರು ಕೂಡ ಪ್ರಾಣಾಪಾಯಾದಿಂದ ಪಾರಾಗಿದ್ದಾರೆ. ಆದರೆ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಬಾಸ್ ಪಲ್ಟಿಯಾಗಿದೆ. ಅಪಘಾತದಲ್ಲಿ ಕಾರಿನ ಮುಂಭಾಗ ನುಜ್ಜಾಗಿದ್ದು, ಬಸ್ ರಸ್ತೆಯ ಪಕ್ಕಕ್ಕೆ ಬಿದ್ದಿದ್ದು, ತಕ್ಷಣವೇ ಸ್ಥಳೀಯರು ಗಾಯಗೊಂಡ ವಿದ್ಯಾರ್ಥಿಗಳನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

Comments

Leave a Reply

Your email address will not be published. Required fields are marked *