ಸಾಲಮನ್ನಾ ಮಾಡಿದ ಹೆಚ್‍ಡಿಕೆಗೆ ಜೋಳದ ರೊಟ್ಟಿ, ಚಟ್ನಿ ಪುಡಿ ಗಿಫ್ಟ್ ಕೊಟ್ಟ ರೈತ

ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ ಆಗಿದ್ದಾಗ ಸಾಲಮನ್ನಾ ಕಾರ್ಯಕ್ರಮವನ್ನ ಜಾರಿಗೆ ತಂದಿದ್ದರು. ನೂರಾರು ರೈತರು ಇದರ ಪ್ರಯೋಜನವನ್ನು ಪಡೆದರು. ವಿಶೇಷ ಅಂದ್ರೆ ಸಾಲಮನ್ನಾದಿಂದ ಸಹಾಯ ಪಡೆದ ರೈತರೊಬ್ಬರು ಮಾಜಿ ಸಿಎಂ ಕುಮಾರಸ್ವಾಮಿಗೆ ಪ್ರೀತಿಯ ಊಡುಗೊರೆ ಕೊಟ್ಟಿದ್ದಾರೆ.

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕು ಕಿರೇಸೂರು ಗ್ರಾಮದ ಗೋವಿಂದಪ್ಪನಿಂದ ಸಾಲಮನ್ನಾ ಮಾಡಿದ ಕುಮಾರಸ್ವಾಮಿ ಅವರಿಗೆ ಪ್ರೀತಿಯ ಉಡುಗೊರೆ ಕಳಿಸಿದ್ದಾರೆ. ಕುಮಾರಸ್ವಾಮಿ ಸಿಎಂ ಅಗಿದ್ದಾಗ ಸಾಲ ಭಾದೆಯಿಂದ ಆತ್ಮಹತ್ಯೆ ಮಾಡಿಕೊಳ್ಳಲು ಗೋವಿಂದಪ್ಪ ನಿರ್ಧಾರ ಮಾಡಿದ್ದರು. ಈ ವೇಳೆ ಕುಮಾರಸ್ವಾಮಿ ಅವರಿಗೆ ಪತ್ರ ಬರೆದು ಅಳಲು ತೋಡಿಕೊಂಡಿದ್ದರು. ಪತ್ರಕ್ಕೆ ಸ್ಪಂದಿಸಿದ್ದ ಕುಮಾರಸ್ವಾಮಿ ಸಾಲಮನ್ನಾ ಮಾಡಿದ್ದರು. ಬಳಿಕ ಫೋನ್ ಮೂಲಕ ಗೋವಿಂದಪ್ಪಗೆ ಧೈರ್ಯ ತುಂಬಿದ್ದರು. ಬಳಿಕ ಸಾಲಮನ್ನಾ ಆಗಿ ರೈತ ಗೋವಿಂದಪ್ಪ ಜೀವನ ರೂಪಿಸಿಕೊಂಡಿದ್ದಾರೆ. ಸಾಲಮನ್ನಾ ಮಾಡಿದ್ದಕ್ಕೆ ತನ್ನ ಹೊಲದಲ್ಲಿ ಬೆಳೆದ ಬೆಳೆಯಿಂದ ಜೋಳದ ರೊಟ್ಟಿ, ಶೇಂಗಾ ಚಟ್ನಿಪುಡಿ, ಪಲ್ಯವನ್ನ ತಯಾರಿಸಿ ಕುಮಾರಸ್ವಾಮಿ ಅವರಿಗೆ ಕಳುಹಿಸಿದ್ದಾರೆ.

ಕೊರಿಯರ್ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ನಿವಾಸಕ್ಕೆ ಉಡುಗೊರೆ ಕಳಿಸಿದ್ದಾರೆ. ಕೊರಿಯರ್ ಬಾಕ್ಸ್ ನೋಡಿ ಮೊದಲು ಆತಂಕಗೊಂಡ ಭದ್ರತಾ ಸಿಬ್ಬಂದಿ, ಅಮೇಲೆ ತೆಗೆದು ನೋಡಿದಾಗ ಜೋಳದ ರೊಟ್ಟಿ, ಚಟ್ನಿ ಪುಡಿ ಇದೆ. ಅಲ್ಲದೆ ಒಂದು ಪತ್ರವನ್ನು ಬರೆದು ತಮ್ಮ ಗಿಫ್ಟ್ ಸ್ವೀಕಾರ ಮಾಡಬೇಕು ಅಂತ ಮನವಿ ಮಾಡಿದ್ದಾರೆ. ರೈತ ಗೋವಿಂದಪ್ಪನ ಪ್ರೀತಿಯ ಉಡುಗೊರೆಗೆ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಭಾವುಕರಾಗಿದ್ದಾರೆ.

Comments

Leave a Reply

Your email address will not be published. Required fields are marked *