ಸರ್ಕಾರದ ಸಾಧನೆ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ಡಿಸಿ ಚಾಲನೆ

ಚಾಮರಾಜನಗರ: ರಾಜ್ಯ ಸರ್ಕಾರ ನೂರು ದಿನಗಳನ್ನು ಪೂರೈಸಿ ಮುನ್ನಡೆದಿದೆ. ಈ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ನೆರೆ, ಪ್ರವಾಹ ಸಂದರ್ಭದಲ್ಲಿ ಕೈಗೊಂಡ ಪರಿಹಾರ ಕಾರ್ಯಗಳ ಕುರಿತ ಮೂರು ದಿನಗಳ ಛಾಯಾಚಿತ್ರ ಪ್ರದರ್ಶನ ಚಾಮರಾಜನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಇಂದಿನಿಂದ ಆರಂಭಗೊಂಡಿದೆ.

ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿ, ರಾಜ್ಯ ಸರ್ಕಾರದ ಯೋಜನೆಗಳು ಹಾಗೂ ವಿವಿಧ ಇಲಾಖೆಗಳ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡುವ ವಸ್ತು ಪ್ರದರ್ಶನವನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ರಾಜ್ಯ ಸರ್ಕಾರ ಅನುಷ್ಠಾನಗೊಳಿಸುತ್ತಿರುವ ವಿವಿಧ ಕಾರ್ಯಕ್ರಮಗಳು, ಸಾಧನೆ ಕುರಿತ ಮಾಹಿತಿ ಫಲಕಗಳನ್ನು ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ವೀಕ್ಷಿಸಿದರು. ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಎ.ರಮೇಶ್, ಕೆಎಸ್‍ಆರ್‍ಟಿಸಿ ಸಿಬ್ಬಂದಿ ಹಾಜರಿದ್ದರು.

Comments

Leave a Reply

Your email address will not be published. Required fields are marked *