ಅರಮನೆಯಲ್ಲಿ ಮುಗಿಲು ಮುಟ್ಟಿದ ಹೊಸ ವರ್ಷದ ಸಂಭ್ರಮ

ಮೈಸೂರು: ಮೈಸೂರು ಮಾಗಿ ಉತ್ಸವ ಹಾಗೂ ಹೊಸ ವರ್ಷಾಚರಣೆ ಸಂಭ್ರಮ ಹಿನ್ನೆಲೆಯಲ್ಲಿ ಬುಧವಾರ ಅಂಬಾವಿಲಾಸ ಅರಮನೆ ಆವರಣದಲ್ಲಿ ಸಂಭ್ರಮ ಮನೆ ಮಾಡಿತ್ತು.

ಅರಮನೆಯಲ್ಲಿ ಬುಧವಾರ ಸಂಜೆ 7ರಿಂದ 9 ಗಂಟೆಯವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಕಣ್ಮನ ಸೆಳೆದವು. ಪೊಲೀಸ್ ಬ್ಯಾಂಡ್ ಹಾಗೂ ಸುನಿತಾ ಚಂದ್ರಕುಮಾರ್ ನೇತೃತ್ವದಲ್ಲಿ ಶ್ರೀ ರಘುಲೀಲ ಸಂಗೀತ ಮಂದಿರ ತಂಡದ 110 ಜನರಿಂದ ಶ್ರೀ ಶ್ರೀನಿವಾಸ ಕಲ್ಯಾಣ `ನೃತ್ಯ ವೈಭವ’ ಜನರ ಮನ ಗೆದ್ದಿತು. ರಾತ್ರಿ 9ರಿಂದ 9:30 ಗಂಟೆಯವರೆಗೆ ಬಣ್ಣಗಳ ಚಿತ್ತಾರಗಳಿಂದ ಕೂಡಿದ ಶಬ್ದ ರಹಿತ ಪಟಾಕಿ ಸಿಡಿಸುವ ಕಾರ್ಯಕ್ರಮ ಹೊಸ ವರ್ಷದ ಸಂಭ್ರಮವನ್ನು ಹೆಚ್ಚಿಸಿತ್ತು.

ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ನಿಧನ ಹಿನ್ನೆಲೆಯಲ್ಲಿ ಶೋಕಾಚರಣೆ ಇದ್ದ ಕಾರಣ ನಿನ್ನೆ ನಡೆಯಬೇಕಿದ್ದ ಕಾರ್ಯಕ್ರಮ ಇವತ್ತು ನಡೆಯಿತು. ಇಂದು ಅರಮನೆಯಲ್ಲಿ ಸಂಭ್ರಮದಿಂದ ಹೊಸ ವರ್ಷವನ್ನು ಆಚರಿಸಲಾಯಿತು.

Comments

Leave a Reply

Your email address will not be published. Required fields are marked *