ಸ್ಫೋಟಿಸುವ ಮೂಲಕ ಬಾಂಬ್ ನಿಷ್ಕ್ರಿಯ

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಬಾಂಬ್ ನ್ನು ಸ್ಫೋಟಿಸುವ ಮೂಲಕ ನಿಷ್ಕ್ರಿಯಗೊಳಿಸಲಾಗಿದೆ.

ಇಂದು ಬೆಳಗ್ಗೆ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಸಜೀವ ಬಾಂಬ್ ನ್ನು ಕೆಂಜಾರು ಮೈದಾನದಲ್ಲಿ ಬಾಂಬ್ ಸ್ಕ್ವಾಡ್ ಸ್ಫೋಟಿಸಿ, ಭಾರೀ ದುರಂತವೊಂದನ್ನು ತಪ್ಪಿಸಿದ್ದಾರೆ. ಆಟೋದಲ್ಲಿ ಬಂದ ಅಪರಿಚಿತ ಟಿಕೆಟ್ ಕೌಂಟರ್ ಬಳಿ ಬ್ಯಾಗ್ ಇರಿಸಿ ನಾಪತ್ತೆ ಆಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿತ್ತು. ಮಂಗಳೂರು ವಿಮಾನ ನಿಲ್ದಾಣದ ಸಿಸಿಟಿವಿ ದೃಶ್ಯಗಳ ಫೋಟೋ ಪಬ್ಲಿಕ್ ಟಿವಿಗೆ ಲಭ್ಯವಾಗಿದ್ದು, ಕ್ಯಾಪ್ ಹಾಕಿರುವ ಒಬ್ಬ ಕೈಯಲ್ಲಿ ಬುಕ್ ಹಿಡಿದಿದ್ದಾನೆ. ಈ ವ್ಯಕ್ತಿ ನಿಲ್ದಾಣದಿಂದ ಹೊರಹೋಗುವುದನ್ನು ಫೋಟೋದಲ್ಲಿ ಕಾಣಬಹುದಾಗಿದೆ. ಹಾಗೆಯೇ ಶಂಕಿತ ಬಂದಿದ್ದ ಎನ್ನಲಾದ ಆಟೋದ ಎರಡು ಫೋಟೋಗಳು ಸಹ ಪಬ್ಲಿಕ್ ಟಿವಿಗೆ ಲಭಿಸಿವೆ.

ಸಜೀವ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಮಂಗಳೂರು ಸೇರಿದಂತೆ ಬಹುತೇಕ ನಗರಗಳಲ್ಲಿ ಕಚ್ಚೆಚ್ಚರ ವಹಿಸಲಾಗಿದೆ. ಶಂಕಿತ ಉಡುಪಿ ಮೂಲಕವೇ ಬೇರೆ ಕಡೆ ತೆರಳಿರುವ ಸಾಧ್ಯತೆಗಳಿವೆ ಎನ್ನಲಾಗಿದ್ದು, ಈ ಸಂಬಂಧ ಉಡುಪಿ ಪ್ರಮುಖ ರಸ್ತೆ, ಕೃಷ್ಣ ಮಠ, ರೈಲ್ವೇ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಇತ್ತ ಮಂಗಳೂರಿನಿಂದ ಉಡುಪಿಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿ ರೈಲ್ವೇ ನಿಲ್ದಾಣ, ಬಸ್ ನಿಲ್ದಾಣ, ನಗರದ ಪ್ರಮುಖ ರಸ್ತೆಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಶಂಕಿತ ಮಂಗಳೂರಿನಿಂದ ಉಡುಪಿಗೆ ರೈಲ್ವೇ ಮೂಲಕ ಪ್ರಯಾಣ ಬೆಳೆಸಿರುವ ಅನುಮಾನದ ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಕೆಲವು ದಿನಗಳ ಹಿಂದ ತಮಿಳುನಾಡಿನ ಪೊಲೀಸ್ ಅಧಿಕಾರಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಇಬ್ಬರು ಯುವಕರನ್ನು ಬಂಧಿಸಲಾಗಿತ್ತು. ಹೀಗಾಗಿ ಉಡುಪಿ ಸೇರಿದಂತೆ ದಕ್ಷಿಣ ಕನ್ನಡದ ಅಕ್ಕಪಕ್ಕ ಜಿಲ್ಲೆಗಳಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

Comments

Leave a Reply

Your email address will not be published. Required fields are marked *