ಕರಾವಳಿ ಪ್ರದೇಶದಲ್ಲಿ ಭಯೋತ್ಪಾದಕ ಸಂಘಟನೆ ಕೆಲಸ ಮಾಡುತ್ತಿರುವುದು ಸತ್ಯ: ಶೋಭಾ ಕರಂದ್ಲಾಜೆ

ಬೆಳಗಾವಿ: ಕರಾವಳಿಯ ಪ್ರದೇಶದಲ್ಲಿ ಭಯೋತ್ಪಾದಕ ಸಂಘಟನೆಗಳು ಕೆಲಸ ಮಾಡುತ್ತಿರುವುದು ಸತ್ಯ. ಕೇರಳ ಹಾಗೂ ಬೇರೆ ಬೇರೆ ಭಾಗಗಳಿಂದ ಬಂದವರು ಸಮಾಜ ದ್ರೋಹ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಬಾಂಬ್ ಪತ್ತೆಯಾದ ಪ್ರಕರಣ ಸಂಪೂರ್ಣ ತನಿಖೆಯಾದ ಬಳಿಕ ಘಟನೆಯ ಸತ್ಯಾಸತ್ಯತೆ ಹೊರಬರಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿರುವ ಬಗ್ಗೆ ಯಾರು? ಏಕೆ? ಇಟ್ಟಿದ್ದಾರೆ. ಹೇಗೆ ಅಲ್ಲಿಗೆ ಬಂತು ಎಂಬ ಕುರಿತಾಗಿ ತನಿಖೆ ನಡೆಯಬೇಕಿದೆ. ಈಗಲೇ ಏನು ಹೇಳಲು ಸಾಧ್ಯವಿಲ್ಲ ಎಂದರು.

ಕರಾವಳಿಯ ಭಾಗದಲ್ಲಿ ಭಯೋತ್ಪಾದಕ ಸಂಘಟನೆಗಳು ಸಕ್ರೀಯವಾಗಿ ತೊಡಗಿಕೊಂಡಿವೆ. ಅಲ್ಲದೇ ಸ್ಥಳೀಯ ಮಂಗಳೂರಿಗರನ್ನು ಕೆಲವರು ದುರುಪಯೋಗ ಮಾಡುತ್ತಿದ್ದಾರೆ. ಯಾವ ಸಂಘಟನೆಯ ಜೊತೆ ಯಾರು? ಯಾವುದರಲ್ಲಿ ಶಾಮಿಲಾಗಿದ್ದಾರೆ. ಇಷ್ಟು ದಿನ ಕಾಶ್ಮೀರ, ಸಿರಿಯಾ, ಪಿಓಕೆಯಲ್ಲಿ ಕಾರ್ಯಾಚರಣೆ ಮಾಡುತ್ತಿರುವಂಥ ಸಂಘಟನೆಯೊಂದಿಗೆ ಶಾಮೀಲಾಗಿದ್ದಾರೆ ಎನ್ನುವುದನ್ನು ತನಿಖೆ ಮಾಡಬೇಕಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿಕೊಂಡು ತನಿಖೆಯನ್ನು ಚುರುಕುಗೊಳಿಸುತ್ತದೆ. ಭಯೋತ್ಪಾದಕ ಚುಟುವಟಿಕೆಯಲ್ಲಿ ಭಾಗಿಯಾದವರಿಗೆ ತಕ್ಕ ಶಿಕ್ಷೆ ಕೊಡಿಸಿ ತಪ್ಪಿತಸ್ಥರ ಮುಖವಾಡ ಕಳಚುತ್ತದೆ ಎನ್ನುವ ವಿಶ್ವಾಸ ಇದೆ ಎಂದರು.

ಪಿಎಫ್‍ಐ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧ ಮಾಡಲು ಕೇಂದ್ರ ಮತ್ತು ರಾಜ್ಯ ಸರಕಾರ ಮಾಹಿತಿಯನ್ನು ಕಲೆ ಹಾಕುತ್ತಿದೆ. ಎಸ್‍ಡಿಪಿಐ ಹಾಗೂ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು ನಿಷೇಧ ಮಾಡಬೇಕು. ಕಾರಣ ಈ ಸಂಘಟನೆಯ ಹಲವರು ಸಮಾಜ ದ್ರೋಹ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸಾಕಷ್ಟು ಕೊಲೆ ಪ್ರಕರಣದಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗೆ ಮಾಜಿ ಸಚಿವ ತನ್ವಿರ್ ಸೇಠ್ ಅವರಿಗೂ ಕೂಡ ಚೂರಿ ಹಾಕಿ ಹತ್ಯೆ ಮಾಡುವ ಸಂಚು ರೂಪಿಸಿದ್ದ ಇಂಥ ಸಂಘಟನೆಗಳನ್ನು ನಿಷೇಧ ಮಾಡಲಾಗುವುದು ಎಂದರು.

Comments

Leave a Reply

Your email address will not be published. Required fields are marked *