ಅಪರಿಚಿತ ವಾಹನ ಡಿಕ್ಕಿ- ಬೈಕ್ ಸವಾರನ ತಲೆ ಛಿದ್ರ ಛಿದ್ರ

ಗದಗ: ಅಪರಿಚಿತ ವಾಹನವೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಬಳಿ ನಡೆದಿದೆ.

ಕಾರ್ತಿಕ್ ಕಲಾಲ (27) ಮೃತ ಬೈಕ್ ಸವಾರ ಗಜೇಂದ್ರಗಡ ಪಟ್ಟಣದ ಕಲಾಲ ಕಾಲೋನಿ ನಿವಾಸಿ ಎಂದು ಗುರುತಿಸಲಾಗಿದೆ. ವಾಹನ ಮೃತ ಕಾರ್ತಿಕ್ ತಲೆ ಭಾಗದ ಮೇಲೆ ಹರಿದಿರುವುದರಿಂದ ತಲೆ ಸಂಪೂರ್ಣ ಛಿದ್ರ ಛಿದ್ರವಾಗಿ ಗುರುತು ಸಿಗದ ಸ್ಥಿತಿಯಲ್ಲಿದೆ.

ಸ್ಥಳಕ್ಕೆ ಗಜೇಂದ್ರಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಮಾಡಿದ ವಾಹನ ಯಾವುದು ಎಂದು ತಿಳಿದು ಬಂದಿಲ್ಲ. ಈ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತ ಮಾಡಿದ ವಾಹನಕ್ಕಾಗಿ ಪೊಲೀಸರು ಬಲೆಬೀಸಿದ್ದಾರೆ.

Comments

Leave a Reply

Your email address will not be published. Required fields are marked *