ಅವ್ಯಾಚ ಶಬ್ದಗಳಿಂದ ನಿಂದನೆ- ಮನನೊಂದು ಆತ್ಮಹತ್ಯೆ

ಬೆಳಗಾವಿ/ಚಿಕ್ಕೋಡಿ: ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಕ್ಕೆ ಮನನೊಂದು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಣಿವಾಡ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಮಲ್ಲಪ್ಪ ಹೊಳೆಪ್ಪಾ ಮಾನಗಾಂವಿ (45) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮಹಿಳೆ ವಿಷಯಕ್ಕೆ ಸಂಬಂಧಿಸಿದಂತೆ ಸಹೋದರರಾದ ಭೀಮಪ್ಪ ಉಪ್ಪಾರಟ್ಟಿ, ಸುರೇಶ್ ಉಪ್ಪಾರಟ್ಟಿ, ಅಣ್ಣಪ್ಪ ಉಪ್ಪಾರಟ್ಟಿ ಮೂವರು ಇದೇ ತಿಂಗಳು 24ರಂದು ಮಲ್ಲಪ್ಪನಿಗೆ ಅಶ್ಲೀಲ ಶಬ್ದಗಳಿಂದ ನಿಂದಿಸಿದ್ದಾರೆ. ಅಷ್ಟೇ ಅಲ್ಲದೇ ಆತನ ಮೇಲೆ ದೈಹಿಕವಾಗಿಯೂ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಇದರಿಂದ ಮಾನಸಿಕವಾಗಿ ನೊಂದು, ಜೀವನದಲ್ಲಿ ಜಿಗುಪ್ಸೆಗೊಂಡ ಮಲ್ಲಪ್ಪ ಮಾನಗಾಂವಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರಾರಿಯಾದ ಆರೋಪಿಗಳ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ. ಈ ಕುರಿತು ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *