ರಾಮದಾಸ್ ಚಿಕಿತ್ಸೆ ಕುರಿತು ಹೆಲ್ತ್ ಬುಲೆಟಿನ್

ಮೈಸೂರು: ಜಿಲ್ಲೆಯ ಕೆ.ಆರ್. ಕ್ಷೇತ್ರದ ಬಿಜೆಪಿ ಶಾಸಕ ಎಸ್.ಎ. ರಾಮದಾಸ್‍ಗೆ ಹೃದಯಾಘಾತವಾದ ಕುರಿತು ಚಿಕಿತ್ಸೆ ನೀಡಿರುವ ಮೈಸೂರಿನ ಅಪೋಲೋ ಆಸ್ಪತ್ರೆ ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ.

ರಾಮದಾಸ್ ಅವರು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಿರಿಯ ಕಾರ್ಡಿಯಾಲಿಜಿಸ್ಟ್ ಹಾಗೂ 10ಕ್ಕೂ ಹೆಚ್ಚಿನ ಸಿಬ್ಬಂದಿ ಅವರಿಗೆ ಚಿಕಿತ್ಸೆ ನೀಡಿದ್ದಾರೆ.

ಇಂದು ಮುಂಜಾನೆ 3:15ರ ವೇಳೆಗೆ ಎದೆ ನೋವಿನಿಂದ ಅವರು ಆಸ್ಪತ್ರೆಗೆ ದಾಖಲಾದರು. ಅವರಿಗೆ ಯಶಸ್ವಿಯಾಗಿ ಅಪರೇಷನ್ ಮಾಡಿ ಸದ್ಯ ಸ್ಟಂಟ್ ಅಳವಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಶಾಸಕ ಎಸ್.ಎ ರಾಮದಾಸ್ ಅವರಿಗೆ ಇಂದು ಬೆಳಗ್ಗಿನ ಜಾವ ಲಘು ಹೃದಯಾಘಾತವಾಗಿತ್ತು. ತಕ್ಷಣ ರಾಮ್‍ದಾಸ್ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Comments

Leave a Reply

Your email address will not be published. Required fields are marked *