ವಾಟ್ಸಪ್ ದೂರು ಪರಿಶೀಲನೆಗೆ ಸಚಿವ ಸುರೇಶ್ ಕುಮಾರ್ ದಿಢೀರ್ ಭೇಟಿ

ಮಂಡ್ಯ: ಮೂಲಭೂತ ಸೌಕರ್ಯಗಳಿಲ್ಲ ಎಂದು ವಾಟ್ಸಪ್‍ನಲ್ಲಿ ದೂರು ಬಂದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಸತಿ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳಿಲ್ಲ ಎಂದು ಸಚಿವ ವಾಟ್ಸಪ್ ನಂಬರಿಗೆ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿ, ಸಮಸ್ಯೆ ಬಗ್ಗೆ ವಿದ್ಯಾರ್ಥಿಗಳಿಂದಲೂ ಮಾಹಿತಿ ಪಡೆದರು.

ಬಳಿಕ ಮಾತನಾಡಿದ ಸುರೇಶ್ ಕುಮಾರ್, “ಸ್ನೇಹಿತರೊಬ್ಬರು ಶಾಲೆಯಲ್ಲಿ ಕುಡಿಯುವ ನೀರಿಲ್ಲ, ಮಲಗಲು ಸ್ಥಳವಿಲ್ಲ, ಸ್ನಾನಕ್ಕೆ ಬಿಸಿ ನೀರು ಕೊರತೆ ಇದೆ ವಾಟ್ಸಪ್‍ನಲ್ಲಿ ತಿಳಿಸಿದರು. ಈ ಹಿನ್ನೆಲೆಯಲ್ಲಿ ಇಂದು ಪರಿಶೀಲನೆ ನಡೆಸಿದ್ದೇನೆ. ಇಲ್ಲಿನ ಮಕ್ಕಳ ಜೊತೆ ಮಾತನಾಡಿದ್ದೇನೆ. ವಸತಿ ಶಾಲೆಗೆ ಬೇಕಾದ ಸೌಕರ್ಯ ಈ ಶಾಲೆಯಲ್ಲಿ ಇಲ್ಲ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮಕ್ಕಳಿಗೆ ಯೋಗ್ಯ ವಾತಾವರಣ ಸೃಷ್ಟಿ ಮಾಡಲು ಪ್ರಯತ್ನಿಸುತ್ತೇವೆ” ಎಂದು ಭರವಸೆ ನೀಡಿದ್ದಾರೆ.

Comments

Leave a Reply

Your email address will not be published. Required fields are marked *