ಆಸ್ತಿ ಆಸೆಗೆ ಏಳು ವರ್ಷದ ಅಣ್ಣನ ಮಗನನ್ನು ನೀರಿನಲ್ಲಿ ಮುಳುಗಿಸಿ ಕೊಂದ

ಚಿತ್ರದುರ್ಗ: ಆಸ್ತಿ ಆಸೆಗಾಗಿ ಏಳು ವರ್ಷದ ಅಣ್ಣನ ಮಗನನ್ನು ನೀರಿನಲ್ಲಿ ಮುಳಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿ ಹಳ್ಳಕೆ ಎಸೆದಿರುವ ಘಟನೆ ಚಳ್ಳಕೆರೆ ತಾಲೂಕಿನ ಬೋಸೇದೇವರಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ.

ರಂಗಸ್ವಾಮಿಯವರ ಪುತ್ರ ಏಳು ವರ್ಷದ ಗೋವಿಂದ್ ತನ್ನ ಚಿಕ್ಕಪ್ಪನಿಂದಲೇ ಹತ್ಯೆಯಾದ ದುರ್ದೈವಿ. ರಂಗಸ್ವಾಮಿ ಸಹೋದರ ಚಿರಂಜೀವಿ ಬಾಲಕನಿಗೆ ಪಾರಿವಾಳದ ಆಸೆ ತೋರಿಸಿ ಕರೆದೊಯ್ದು, ನೀರಿನಲ್ಲಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಳಿಕ ಗೋಣಿ ಚೀಲದಲ್ಲಿ ಮೃತ ದೇಹವನ್ನು ಕಟ್ಟಿ ಗ್ರಾಮದ ಹೊರ ವಲಯದ ಹಳ್ಳದಲ್ಲಿ ಎಸೆದಿದ್ದಾನೆ.

ಚಿರಂಜೀವಿ ಹಾಗೂ ರಂಗಸ್ವಾಮಿಯ ತಂದೆ ಕೋಪದಲ್ಲಿ ನಿಮಗೆ ಆಸ್ತಿ ಕೊಡುವುದಿಲ್ಲ, ನನ್ನ ಮೊಮ್ಮಗ ಗೋವಿಂದನ ಹೆಸರಿಗೆ ಬರೆಯುತ್ತೇನೆ ಎಂದಿದ್ದರು. ಹೀಗಾಗಿ ಆಸ್ತಿ ಕೈ ತಪ್ಪುತ್ತದೆ ಎಂಬ ಆತಂಕದಿಂದ ಅಣ್ಣನ ಮಗ ಗೋವಿಂದನನ್ನು ಈತ ಕೊಲೆ ಮಾಡಿದ್ದಾನೆ ಎಂದು ಗೋವಿಂದ್ ತಂದೆ ರಂಗಸ್ವಾಮಿ ಆರೋಪಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ನಾಯಕನಹಟ್ಟಿ ಠಾಣೆ ಪೊಲೀಸರು, ಆರೋಪಿ ಚಿರಂಜೀವಿಯನ್ನು ವಶಕ್ಕೆ ಪಡೆದಿದ್ದಾರೆ. ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಿದ್ದಾರೆ.

Comments

Leave a Reply

Your email address will not be published. Required fields are marked *