ಹಾಸನದಲ್ಲಿ ಈಗ ಇರೋದು ದೇವೇಗೌಡ್ರ ಕುಟುಂಬದ ವಿರುದ್ಧದ ರಾಜಕಾರಣ: ಎ.ಮಂಜು

ಹಾಸನ: ಎಚ್‍ಡಿ ಕುಮಾರಸ್ವಾಮಿ, ರೇವಣ್ಣ ತಮ್ಮ ಮಕ್ಕಳಿಗಾಗಿ ದೇವೇಗೌಡರನ್ನು ತೆಗೆದರು. ಆದರೆ ಲಾಭ ಪಡೆದವರು ರೇವಣ್ಣ ಮತ್ತು ಮಗ ಮಾತ್ರ ಎಂದು ಮಾಜಿ ಸಚಿವ ಎ.ಮಂಜು ದೇವೇಗೌಡರ ಕುಟುಂಬ ರಾಜಕಾರಣದ ವಿರುದ್ಧ ವ್ಯಂಗ್ಯವಾಡಿದ್ದಾರೆ.

ನಮ್ಮ ಜಿಲ್ಲೆಯಲ್ಲಿ ಕಾಂಗ್ರೆಸ್, ದಳ, ಬಿಜೆಪಿ ಅಂತ ರಾಜಕಾರಣ ಇಲ್ಲ. ಇಲ್ಲಿ ಇರೋದು ದೇವೇಗೌಡರ ಕುಟುಂಬದ ವಿರುದ್ಧದ ರಾಜಕಾರಣ. ಜಿಲ್ಲೆಯಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಉಳಿಯಬೇಕು ಅಂದ್ರೆ ನಾವು ಒಟ್ಟಿಗೆ ಸೇರಿ ಅವರನ್ನು ಸದೆಬಡಿಯಬೇಕು ಎಂದು ತಿಳಿಸಿದ್ರು.

ಈಗ ನಮ್ಮ ಸರ್ಕಾರ ಇದೆ. ಜನಪರವಾದ ಕೆಲಸ ಮಾಡಲು ಅವಕಾಶ ಇದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ 4 ರಿಂದ 5 ಕ್ಷೇತ್ರ ಗೆಲ್ಲುತ್ತೇವೆ. ನಾವು ದೇವೇಗೌಡರ ಕುಟುಂಬದ ವಿರೋಧಿಗಳು. ಇಡೀ ಜಿಲ್ಲೆಯ 70 ರಷ್ಟು ಜನ ದೇವೇಗೌಡರ ಕುಟುಂಬದ ವಿರೋಧ ಇದ್ದಾರೆ. ದೇವೇಗೌಡರು ಕೊನೆ ಸಾರಿ ಪಾರ್ಲಿಮೆಂಟ್‍ನಲ್ಲಿ ಗೆಲ್ಲಲಿ ಎಂದು ಆಸೆಪಟ್ಟೆ. ಆದರೆ ಮಕ್ಕಳು ಮೊಮ್ಮಕ್ಕಳನ್ನ ರಾಜಕೀಯವಾಗಿ ಉಳಿಸಲು ಹೊರಟರು. ದೇವೇಗೌಡರು ಇದುವರೆಗೂ ಪಕ್ಷ ಸಂಘಟನೆ ಬಿಟ್ಟರೆ ರಾಜ್ಯದ ಅಭಿವೃದ್ಧಿಗೆ ರಾಜಕಾರಣ ಮಾಡುತ್ತೇನೆ ಎಂದು ಹೇಳಿಲ್ಲ ಎ.ಮಂಜು ಕಿಡಿಕಾರಿದ್ದಾರೆ.

ಇದೇ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂಬ ಮಾಜಿ ಸಚಿವ ರೇವಣ್ಣ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, ರೇವಣ್ಣ ಆರೋಪ ಮಾಡೋದ್ರಲ್ಲಿ ನಿಸ್ಸೀಮರು. ಇವರಿಬ್ಬರು ಅಣ್ಣ-ತಮ್ಮಂದಿರು ಸೇರಿಕೊಂಡು ಕ್ಯಾಬಿನೆಟ್, ಸರ್ಕಾರದ ಆದೇಶ ಇಲ್ಲದೇ ಇರೋದನ್ನು ಸ್ಯಾಂಕ್ಷನ್ ಮಾಡಿದ್ದಾರೆ. ಈ ರೀತಿಯ ಕಾನೂನು ಅವರು ಅಣ್ಣ, ತಮ್ಮಂದಿರು ಇದ್ದಾಗ ಮಾತ್ರ ನಡೆಯುತ್ತೆ. ಯಡಿಯೂರಪ್ಪ ರಾಜ್ಯದ ಬಗ್ಗೆ ಚಿಂತೆ ಇರುವ ಅಪರೂಪದ ಮುಖ್ಯಮಂತ್ರಿ. ಯಡಿಯೂರಪ್ಪ ಹೋರಾಟದಿಂದ ಬಂದವರು. ಆದರೆ ಇವರು ಅಪ್ಪನ ಹೆಸರು, ಕೃಪಾಪೋಷಿತದಿಂದ ಬಂದವರು ಎಂದು ಆಕ್ರೋಶ ಹೊರಹಾಕಿದ್ದಾರೆ.

Comments

Leave a Reply

Your email address will not be published. Required fields are marked *