ತೊಗರಿ ಖರೀದಿ ಕೇಂದ್ರದಲ್ಲಿ ರೈತರಿಂದ ಹಣ ವಸೂಲಿ- ವಿಡಿಯೋ ವೈರಲ್

ವಿಜಯಪುರ: ಜಿಲ್ಲೆಯ ತೊಗರಿ ಖರೀದಿ ಕೇಂದ್ರದಲ್ಲಿ ರೈತರಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ, ಇದೀಗ ಖರೀದಿ ಕೇಂದ್ರದ ಸಿಬ್ಬಂದಿ ರೈತರಿಂದ ಹಣ ವಸೂಲಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದಲ್ಲಿನ ತೊಗರಿ ಖರೀದಿ ಕೇಂದ್ರದಲ್ಲಿ ಹಣ ವಸೂಲಿ ಮಾಡಿರುವ ವಿಡಿಯೋ ವೈರಲ್ ಆಗಿದೆ. ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿರುವ ಇಸಾಕ್ ಬಡಿಗೇರ್ ರೈತರಿಂದ ಪ್ರತಿ ಕ್ವಿಂಟಲ್ ಗೆ 100 ರಿಂದ 150 ರೂಪಾಯಿ ವಸೂಲಿ ಮಾಡುತ್ತಿದ್ದಾನೆ. ಕಾಖಂಡಕಿ ತೊಗರಿ ಖರೀದಿ ಕೇಂದ್ರ ದಲ್ಲಿನ ಸಿಬ್ಬಂದಿಯ ಈ ವರ್ತನೆಯಿಂದ ರೈತರು ಬೇಸತ್ತಿದ್ದಾರೆ.

ಪ್ರತಿ ರೈತರಿಂದ ಉಚಿತವಾಗಿ ತೊಗರಿ ಖರೀದಿ ಮಾಡಿಕೊಳ್ಳಬೇಕು ಎಂದು ಸರ್ಕಾರ ಆದೇಶ ನೀಡಿದರೂ, ಈ ಕಂಪ್ಯೂಟರ್ ಆಪರೇಟರ್ ಮಾತ್ರ ರಾಜಾರೋಷವಾಗಿ ರೈತರಿಂದ ಸುಲಿಗೆ ಮಾಡುತ್ತಿದ್ದಾನೆ. ಒಬ್ಬ ರೈತರಿಂದ 10 ಕ್ವಿಂಟಲ್ ತೊಗರಿ ಖರೀದಿ ಮಾಡಬೇಕು ಎಂದು ಸರ್ಕಾರದ ಸೂಚನೆಯಿಂದ ಪ್ರತಿ ರೈತರಿಂದಲೂ 10 ಕ್ವಿಂಟಲ್ ಗೆ ಕಡಿಮೆ ಎಂದರೂ ಸಾವಿರ ರೂಪಾಯಿ ಸುಲಿಗೆ ಮಾಡಲಾಗುತ್ತಿದೆ.

ಎರಡು ದಿನಗಳ ಹಿಂದಷ್ಟೇ ಇಂತಹ ಅಕ್ರಮ ದಂಧೆಯ ತೊಗರಿ ಖರೀದಿ ಕೇಂದ್ರದ ಮೇಲೆ ಎಸಿಬಿ ದಾಳಿ ನಡೆಸಿತ್ತು. ಆದರೂ ಎಚ್ಚೆತ್ತುಗಳ್ಳದ ಖದೀಮರು ಅದೇ ಕೆಲಸ ಮುಂದುವರಿಸಿದ್ದು, ರೈತರಿಂದ ಸುಲಿಗೆ ಮಾಡುತ್ತಿದ್ದಾರೆ.

Comments

Leave a Reply

Your email address will not be published. Required fields are marked *