ಸರ್ಕಾರಿ ಜಮೀನಿನ ಹೆಸರಲ್ಲಿ ಬೆಳೆ ಪರಿಹಾರ ನೀಡಿದ ವಿಎ ಬಂಧನ

– ನೆರೆ ಪರಿವಾರದಲ್ಲೂ ಗ್ರಾಮಲೆಕ್ಕಾಧಿಕಾರಿ ತಾರತಮ್ಯ

ಹಾವೇರಿ: ನೆರೆ ಪರಿಹಾರ ವಿತರಣೆಯಲ್ಲಿ ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಬಂಧನ ಮಾಡಲಾಗಿದೆ.

ಬಂಧಿತ ಗ್ರಾಮ ಲೆಕ್ಕಾಧಿಕಾರಿಯನ್ನು ವೆಂಕಟೇಶ ಮಡಿವಾಳರ(26) ಎಂದು ಗುರುತಿಸಲಾಗಿದೆ. ಸರ್ಕಾರಿ ಜಮೀನಿನ ಹೆಸರಿನಲ್ಲಿ ಬೆಳೆ ಪರಿಹಾರ ಹಂಚಿಕೆ ಮಾಡಿದ್ದ. ಅಲ್ಲದೆ ಬೆಳೆ ಪರಿಹಾರದ ಹಣವನ್ನು ಸ್ನೇಹಿತನ ಖಾತೆಗೆ ಜಮಾ ಆಗುವಂತೆ ಈ ಗ್ರಾಮ ಲೆಕ್ಕಾಧಿಕಾರಿ ಮಾಡಿದ್ದ ಎಂದು ಆರೋಪಿಸಲಾಗಿದೆ.

ಅಲ್ಲದೆ ಆಗಸ್ಟ್ 2019ರಲ್ಲಿ ಸಂಭವಿಸಿದ ಅತಿವೃಷ್ಟಿಯಿಂದ ರೈತರ ಅಪಾರ ಪ್ರಮಾಣದ ಬೆಳೆ ಹಾಳಾಗಿತ್ತು. ಇದರ ಬೆಳೆ ಪರಿಹಾರ ನೀಡುವಲ್ಲಿ ಸಹ ಗ್ರಾಮ ಲೆಕ್ಕಾಧಿಕಾರಿ ತಾರತಮ್ಯ ಮಾಡಿದ್ದ. ಈ ಕುರಿತು ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಅಪರ ಜಿಲ್ಲಾಧಿಕಾರಿ ಯೋಗೇಶ್ವರ್ ದೂರು ದಾಖಲಿಸಿದ್ದರು. ಇದರ ಆಧಾರದಲ್ಲಿ ಗ್ರಾಮೀಣ ಠಾಣೆಯ ಪೊಲೀಸರು ಗ್ರಾಮ ಲೆಕ್ಕಾಧಿಕಾರಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Comments

Leave a Reply

Your email address will not be published. Required fields are marked *