ಹೂ ಬಿಟ್ಟಿದ್ದ 4 ಎಕರೆ ಕಾಫಿ ಗಿಡಗಳನ್ನು ಕಡಿದ ಅಧಿಕಾರಿಗಳು-ರೈತ ಕಂಗಾಲು

ಚಿಕ್ಕಮಗಳೂರು: ತುಮಕೂರಿನ ಘಟನೆ ಮಾಸುವ ಮುನ್ನವೇ ಚಿಕ್ಕಮಗಳೂರಿನ ಅರಣ್ಯಾಧಿಕಾರಿಗಳು ಹೂ ಬಿಟ್ಟಿದ್ದ ಕಾಫಿ ಗಿಡಗಳಿಗೆ ಕೊಡಲಿ ಏಟು ಹಾಕಿದ್ದಾರೆ. ಅಧಿಕಾರಿಗಳ ದಿಢೀರ್ ನಿರ್ಧಾರದಿಂದ ರೈತ ಕಂಗಾಲಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ದೇವಗೋಡು ಗ್ರಾಮದ ರೈತ ದಿನೇಶ್ ಹೆಬ್ಬಾರ್ ಎಂಬವರಿಗೆ ಸೇರಿದ ಕಾಫಿ ಗಿಡಗಳನ್ನು ಅಧಿಕಾರಿಗಳು ನಾಶಗೊಳಿಸಿದ್ದಾರೆ. ದೇವಗೋಡು ಗ್ರಾಮದ ಸರ್ವೆ ನಂ. 78 ರಲ್ಲಿ ದಿನೇಶ್ ಅವರ ತೋಟವಿದೆ. ದಿನೇಶ್ ಅವರ ಅರಣ್ಯ ಪ್ರದೇಶ ಒತ್ತುವರಿ ಆರೋಪಗಳಿದ್ದು, ಪ್ರಕರಣ ನ್ಯಾಯಾಲಯದಲ್ಲಿದೆ. ಮೂರು ವರ್ಷಗಳ ಹಿಂದೆ ಅರಣ್ಯಾಧಿಕಾರಿಗಳು ದಿನೇಶ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಯಥಾ ಸ್ಥಿತಿ ಕಾಯ್ದುಕೊಳ್ಳುವಂತೆ ನ್ಯಾಯಾಲಯ ತಡೆ ನೀಡಿತ್ತು. ಇದನ್ನೂ ಓದಿ: 30 ವರ್ಷಗಳಿಂದ ಬೆಳೆದು ನಿಂತಿದ್ದ ತೋಟ ನಾಶ ಮಾಡಿದ್ರಾ ತಹಶೀಲ್ದಾರ್?

ಪ್ರಕರಣ ನ್ಯಾಯಾಲಯದಲ್ಲಿರುವ ಅರಣ್ಯಾಧಿಕಾರಿಗಳು ಕಾಫಿ ಗಿಡಗಳನ್ನು ನಾಶ ಮಾಡಿದ್ದಾರೆ. ಕಾಫಿ ಗಿಡಗಳು ಹೂ ಬಿಟ್ಟಿದ್ದರಿಂದ ರೈತ ದಿನೇಶ್ ಲಾಭದ ನಿರೀಕ್ಷೆಯಲ್ಲಿದ್ದರು.

Comments

Leave a Reply

Your email address will not be published. Required fields are marked *