ಬಿಬಿಎಂಪಿಯ ಸಿಬ್ಬಂದಿ, ಪೌರಕಾರ್ಮಿಕರಿಗೆ ಬಯೋಮೆಟ್ರಿಕ್ ಭಯ

ಬೆಂಗಳೂರು: ಕೊರೊನೊ ವೈರಸ್, ಕಾಲರಾ ಭಯ ಹರಡುವ ಭೀತಿ ಈಗ ಬಿಬಿಎಂಪಿಯ ಸಿಬ್ಬಂದಿ, ಪೌರಕಾರ್ಮಿಕರಿಗೂ ಕಾಡುತ್ತಿದೆ. ಕಾರಣ ಪಾಲಿಕೆಯಲ್ಲಿ ಹಾಜರಾತಿಗಾಗಿ ಈಗಲೂ ಬಯೋಮೆಟ್ರಿಕ್ ಮುಂದುವರಿಕೆ ಮಾಡಲಾಗಿದೆ.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ, ಬ್ಯಾಟರಾಯನಪುರ, ತ್ಯಾಗರಾಜ್‍ನಗರ ಎಲ್ಲ ಕಡೆ ಬಯೋಮೆಟ್ರಿಕ್ ಮೂಲಕ ಹಾಜರಾತಿ ಪಡೆಯಲಾಗುತ್ತಿದೆ. ಇದು ಸಿಬ್ಬಂದಿಗಳ ಆತಂಕಕ್ಕೆ ಕಾರಣವಾಗಿದೆ. ಇಡೀ ನಗರಕ್ಕೆ ಮುನ್ನಚ್ಚರಿಕೆ ಬಗ್ಗೆ ಅರಿವು ಹೇಳುವ ಬಿಬಿಎಂಪಿ ಮಾತ್ರ ಬಯೋಮೆಟ್ರಿಕ್ ಮುಂದುವರಿಸಿದೆ.

ಈ ಬಗ್ಗೆ ಮಾತನಾಡಿದ ಮೇಯರ್ ಗೌತಮ್ ಕುಮಾರ್, ಈ ವಿಚಾರ ನನ್ನ ಗಮನಕ್ಕೆ ಬೆಳಿಗ್ಗೆಯೇ ಬಂದಿದೆ. ಆಯುಕ್ತರು, ಆಡಳಿತ ವಿಭಾಗದ ವಿಶೇಷ ಆಯುಕ್ತರು, ಈ ಸಂಬಂಧ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ಒಂದೊಮ್ಮೆ ಬಯೋಮೆಟ್ರಿಕ್ ವ್ಯವಸ್ಥೆ ತೆಗೆದರೆ ದುರ್ಬಳಕೆ ಆಗುವ ಸಾಧ್ಯತೆಯೂ ಇದೆ. ಹೀಗಾಗಿ ಬಯೋಮೆಟ್ರಿಕ್ ಸಂಸ್ಥೆ ದೃಷ್ಟಿಯಿಂದ ತೀರ್ಮಾನ ಮಾಡಲಾಗುತ್ತದೆ ಎಂದರು.

Comments

Leave a Reply

Your email address will not be published. Required fields are marked *