ಕೊರೊನಾ ವಿರುದ್ಧ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಂಡ ಕೇಂದ್ರ ಸರ್ಕಾರ

ನವದೆಹಲಿ: ಕೊರೊನಾ ವೈರಸ್ ವಿರುದ್ಧ ಹೋರಾಡಲು ಕೇಂದ್ರ ಸರ್ಕಾರ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಂಡಿದೆ. ಲಾಕ್‍ಡೌನ್ ಕ್ರಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸುವಂತೆ ರಾಜ್ಯ ಸರ್ಕಾರಗಳಿಗೆ ಆದೇಶಿಸಿದೆ.

ಆಯುಷ್ ಮೂಲಕ ದೇಶಾದ್ಯಂತ ಕೊರೊನಾ ಜಾಗೃತಿ ಮೂಡಿಸಲಾಗುತ್ತೆ. 21 ದಿನದ ಲಾಕ್‍ಡೌನ್‍ನಿಂದಾಗಿ ಕೆಲವು ಮಾನಸಿಕ ಸಮಸ್ಯೆಗಳ ವರದಿಯಾಗುತ್ತಿದ್ದು, ಇದಕ್ಕಾಗಿ ನಿಮ್ಹಾನ್ಸ್ ಗೆ ಹೆಲ್ಪ್ ಲೈನ್ ತೆರೆಯಲಾಗಿದೆ. ಈ ಮಧ್ಯೆ ಲಾಕ್‍ಡೌನ್ ಅವಧಿಯಲ್ಲಿ ದಿನಪತ್ರಿಕೆ ವಿತರಣೆಗೆ ನಿರ್ಬಂಧ ಇಲ್ಲ ಎಂದು ಗೃಹ ಸಚಿವಾಲಯ ಹೇಳಿದೆ.

ಬಿಗಿ ಕ್ರಮಗಳು ಯಾವುದು?
1. ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಗಡಿ ಸೀಲ್ ಮಾಡಿ
2. ಎಲ್ಲಾ ನಗರ, ಹೆದ್ದಾರಿಗಳಲ್ಲಿ ಜನ ಓಡಾಟ ಕಟ್ಟುನಿಟ್ಟಾಗಿ ನಿರ್ಬಂಧಿಸಿ( ಅಗತ್ಯ ವಸ್ತುಗಳ ಸಾಗಾಟಕ್ಕೆ ಅನುಮತಿ ಇದೆ)
3. ಹೈವೇಗೆ ಇಳಿದವರನ್ನು ಅರೆಸ್ಟ್ ಮಾಡಿ, 14 ದಿನ ಕ್ವಾರಂಟೈನ್‍ನಲ್ಲಿಡಿ
4. ವಲಸೆ ಕಾರ್ಮಿಕರನ್ನು ಹತ್ತಿರದ ಕ್ವಾರಂಟೈನ್ ಸೆಂಟರ್‍ಗಳಿಗೆ ಶಿಫ್ಟ್ ಮಾಡಿ, ಊಟ, ವಸತಿ ಕಲ್ಪಿಸಿ
5. ವಲಸೆ ಕಾರ್ಮಿಕರಿಂದ 1 ತಿಂಗಳು ಬಾಡಿಗೆಗೆ ಒತ್ತಾಯಿಸುವಂತ್ತಿಲ್ಲ(ಮನೆ ಖಾಲಿ ಮಾಡಿಸಿದರೆ ಮಾಲೀಕರ ವಿರುದ್ಧ ಕ್ರಮ)
6. ಲಾಕ್‍ಡೌನ್ ಉಲ್ಲಂಘನೆಯಾದರೆ ಡಿಸಿ, ಎಸ್‍ಪಿಗಳೇ ಹೊಣೆ. ಹೀಗೆ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಬಿಗಿ ಕ್ರಮಗಳನ್ನು ತೆಗೆದುಕೊಂಡಿದೆ.

ಭಾನುವಾರ ಕೊರೊನಾ ವಿಚಾರದ ಬಗ್ಗೆ ಮನ್ ಕಿ ಬಾತ್‍ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದ್ದರು. ಈ ವೇಳೆ ಬಡ ಜನರಿಗೆ ತೊಂದರೆ ಉಂಟುಮಾಡಿದ ಲಾಕ್‍ಡೌನ್ ಕಠಿಣ ಕ್ರಮಗಳನ್ನು ಕೈಗೊಂಡಿದ್ದಕ್ಕಾಗಿ ಕ್ಷಮೆಯಾಚಿಸುತ್ತೇನೆ. ದೇಶಾದ್ಯಂತ ಲಾಕ್‍ಡೌನ್ ಘೋಷಣೆ ಮಾಡಿದ್ದಕ್ಕೆ ಕೆಲವರು ನನ್ನ ಮೇಲೆ ಕೋಪಗೊಂಡಿದ್ದಾರೆ ಅಂತ ನನಗೆ ತಿಳಿದಿದೆ. ಬಡವರಿಗೆ ಇದರಿಂದ ಸಮಸ್ಯೆಯಾಗಿದೆ ಎನ್ನುವುದು ನನಗೆ ತಿಳಿದಿದೆ. ಆದರೆ ಈ ಯುದ್ಧವನ್ನು ಗೆಲ್ಲಲು ಇಂತಹ ಕಠಿಣ ಕ್ರಮಗಳು ಅಗತ್ಯವಾಗಿದ್ದು, ದೇಶದ ರಕ್ಷಣೆಗಾಗಿ ಈ ಕಠಿಣ ನಿರ್ಧಾರ ಕೈಗೊಳ್ಳಲಾಯಿತು ಎಂದು ತಿಳಿಸಿದ್ದರು.

ಕೋವಿಡ್-19 ವಿರುದ್ಧದ ಯುದ್ಧವು ಕಠಿಣವಾದದ್ದು ಮತ್ತು ಅದಕ್ಕೆ ಇಂತಹ ಕಠಿಣ ನಿರ್ಧಾರಗಳು ಬೇಕಾಗುತ್ತವೆ. ಭಾರತದ ಜನರನ್ನು ಸುರಕ್ಷಿತವಾಗಿಡುವುದು ಸರ್ಕಾರದ ಮುಖ್ಯ ಉದ್ದೇಶ. ಯಾರೂ ಉದ್ದೇಶಪೂರ್ವಕವಾಗಿ ಲಾಕ್‍ಡೌನ್ ಘೋಷಣೆಯನ್ನು ಮುರಿಯಲು ಬಯಸುವುದಿಲ್ಲ ಎಂದು ನಂಬಿಕೆ ಹೊಂದಿದ್ದೇನೆ. ಆದರೆ ಕೆಲವರು ಲಾಕ್‍ಡೌನ್ ನಡುವೆಯೂ ಮನೆಯಿಂದ ಹೊರಗೆ ಬರುತ್ತಿದ್ದಾರೆ. ಅಂತವರಿಂದ ಕೊರೊವಾ ವೈರಸ್ ಮತ್ತಷ್ಟು ಹೆಚ್ಚಾಗುತ್ತಿದ್ದು, ನಮ್ಮನ್ನು ರಕ್ಷಿಸಿಕೊಳ್ಳುವುದು ಕಷ್ಟವಾಗುತ್ತದೆ ಎಂದು ಹೇಳಿದ್ದರು.

Comments

Leave a Reply

Your email address will not be published. Required fields are marked *