ರಸ್ತೆ ಅಪಘಾತದಲ್ಲಿ ಪಬ್ಲಿಕ್ ಟಿವಿ ವರದಿಗಾರ ಹನುಮಂತು ನಿಧನ

ಬೆಂಗಳೂರು: ಪಬ್ಲಿಕ್ ಟಿವಿಯ ರಾಮನಗರದ ಜಿಲ್ಲಾ ವರದಿಗಾರ ಹನುಮಂತು ಇಂದು ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ.

ರಾಮನಗರದ ಜಿಲ್ಲಾ ಕಾರಾಗೃಹದ ಬಳಿ ವರದಿ ಮಾಡಿ ಹಿಂದಿರುಗುತ್ತಿದ್ದ ವೇಳೆ ಅಪಘಾತ ನಡೆದಿದೆ. ಹಿಂದಿನಿಂದ ಬಂದ ಎಟಿಎಂಗೆ ಹಣ ತುಂಬುವ ವಾಹನ ಹನುಮಂತ ಅವರ ಬೈಕಿಗೆ ಡಿಕ್ಕಿ ಹೊಡೆದಿದೆ. ರಾಮನಗರದ ಜೈಲಿನಲ್ಲಿರುವ ವಿಚಾರಣಾಧೀನ ಖೈದಿಗಳನ್ನು ಪರಪ್ಪನ ಅಗ್ರಹಾರ ಸ್ಥಳಾಂತರಿಸುವ ಕುರಿತು ತಮ್ಮ ಕೊನೆಯ ವರದಿಯನ್ನು ನೀಡಿದ್ದರು.

ತಮ್ಮ ಪ್ರಾಮಾಣಿಕತೆಯಿಂದಲೇ ಗುರುತಿಸಿಕೊಂಡಿದ್ದ ಹನುಮಂತು, ರಾಮನಗರದಲ್ಲಿ ಚಿರಪರಿಚಿತರು. ತಮ್ಮ ವರದಿಗಳಿಂದಲೇ ಮಾಧ್ಯಮ ಲೋಕದಲ್ಲಿ ಹನುಮಂತು ಗುರುತಿಸಿಕೊಂಡಿದ್ದರು. ಹನುಮಂತು ಕಳೆದುಕೊಂಡು ಪಬ್ಲಿಕ್ ಟಿವಿ ಕುಟುಂಬ ಬಡವಾಗಿದೆ.

ಇನ್ನು ಹನುಮಂತು ನಿಧನಕ್ಕೆ ಶಾಸಕಿ ಅನಿತಾ ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಸಹ ಸಂತಾಪ ಸೂಚಿಸಿ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

Comments

Leave a Reply

Your email address will not be published. Required fields are marked *