ಅರಣ್ಯ ಇಲಾಖೆ ಮಾಹಿತಿದಾರನೇ ಬೇಟೆಗಾರ: ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಆರೋಪಿ

– ಜಿಂಕೆ ಕೊಂದು ಚರ್ಮ ಸುಲಿಯುತ್ತಿದ್ದ ವೇಳೆ ಬಂಧನ

ಚಾಮರಾಜನಗರ: ಅರಣ್ಯ ಇಲಾಖೆ ಮಾಹಿತಿದಾರನೇ ಕಳ್ಳ ಬೇಟೆಗಾರನಾಗಿ ಪ್ರಾಣಿಗಳನ್ನು ವಧೆ ಮಾಡುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ಅರೇಪಾಳ್ಯದಲ್ಲಿ ಘಟನೆ ನಡೆದಿದ್ದು, ನಾಗೇಗೌಡ ಬಂಧಿತ ಬೇಟೆಗಾರ. ಈತ ಅರಣ್ಯ ಇಲಾಖೆಯ ಮಾಹಿತಿದಾರನಾಗಿದ್ದ ಎಂದು ತಿಳಿದುಬಂದಿದ್ದು, ಕಳ್ಳಬೇಟೆಯ ಕುರಿತು ಆಗಾಗ್ಗೆ ಮಾಹಿತಿ ನೀಡುತ್ತಿದ್ದನಂತೆ. ಆದರೆ ಅರಣ್ಯ ಇಲಾಖೆಯ ಮತ್ತೊಬ್ಬ ಮಾಹಿತಿದಾರನಿಂದ ಈತನ ಕುಕೃತ್ಯ ಬೆಳಕಿಗೆ ಬಂದಿದೆ. ಜಿಂಕೆಯೊಂದನ್ನು ಕೊಂದು ಅದರ ಚರ್ಮ ಸುಲಿಯುತ್ತಿದ್ದ ಖಚಿತ ಮಾಹಿತಿ ಮೇಲೆ ಆರ್‍ಎಫ್‍ಒ ಮಹಾದೇವಯ್ಯ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಕೊಂದ ಜಿಂಕೆ, ಕತ್ತಿಯನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

Comments

Leave a Reply

Your email address will not be published. Required fields are marked *