ಆನ್‍ಲೈನ್ ಪೂಜೆ ಮತ್ತಷ್ಟು ದೇಗುಲಗಳಿಗೆ ವಿಸ್ತರಣೆ: ಸಚಿವ ಕೋಟ

ಉಡುಪಿ: ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ಆನ್‍ಲೈನ್ ಪೂಜಾ ಸೇವೆ ಬಗ್ಗೆ ಕೆಲವರ ಆಕ್ಷೇಪ ಇದೆ. ಆನ್‍ಲೈನ್ ಸೇವೆ ಹೊಸ ಯೋಜನೆಯಲ್ಲ. ಈ ಹಿಂದಿನಯೂ ಇತ್ತು. ಈಗ ಮತ್ತಷ್ಟು ದೇವಸ್ಥಾನಗಳನ್ನು ಆನ್‍ಲೈನ್ ಸೇವೆಯ ವ್ಯಾಪ್ತಿಗೆ ಇಲಾಖೆ ತರುತ್ತೇವೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಸಚಿವರು, ಕೊಲ್ಲೂರು ದೇವಸ್ಥಾನದಲ್ಲಿ ಕಳೆದ ವರ್ಷ ಮೂರು ಸಾವಿರ ಆನ್‍ನೈನ್ ಸೇವೆಗಳು ಬಂದಿವೆ. ಮೈಸೂರು ಚಾಮುಂಡೇಶ್ವರಿಯಲ್ಲಿ ಹೋದ ವರ್ಷ 49.50 ಲಕ್ಷ ರೂ. ಜಮಾ ಆಗಿದೆ. ಲಾಕ್‍ಡೌನ್‍ನಿಂದ ಭಕ್ತರಿಗೆ ದೇವಸ್ಥಾನಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ. ಸೇವೆ ಕೊಡಬೇಕೆಂಬ ಹರಕೆ ಹೊತ್ತ ಭಕ್ತರಿಗೆ ಆನ್‍ಲೈನ್ ಸೇವೆಯಿಂದ ಅನುಕೂಲವಾಗಲಿದೆ ಎಂದರು.

ಭಕ್ತರಿಗೆ ನೆಮ್ಮದಿ ಸಿಗಲಿ ಎಂಬ ಕಾರಣಕ್ಕೆ ಆನ್‍ಲೈನ್ ಆರಂಭಿಸಿದ್ದೇವೆ. ಲಾಕ್ ಡೌನ್ ವರೆಗಾದರೂ ಆನ್ಲೈನ್ ಸೇವೆ ಅಗತ್ಯವಿದೆ. ಭಕ್ತರ ಕೋರಿಕೆ ಹಿನ್ನೆಲೆಯಲ್ಲಿ ಈ ಸೇವೆ ಆರಂಭವಾಗಿದೆ ಹೊರತು ನಾವಲ್ಲ ಮಾಡಿದ್ದು ಎಂದರು.

ದೇವಸ್ಥಾನಗಳಿಗೆ ಬಾಗಿಲು ಹಾಕಿದೆ ಪೂಜೆ ಆಗುತ್ತಿಲ್ಲ ಎಂದು ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದೆ. ಎಲ್ಲಾ ದೇವಸ್ಥಾನಗಳನ್ನು ಸಾಂಪ್ರದಾಯಿಕ ಪೂಜೆ ನಡೆಯುತ್ತಲೇ ಇದೆ. ತ್ರಿಕಾಲ, ಕಾಲಮಿತಿಯ ಪೂಜೆಗಳು ನಿಂತಿಲ್ಲ. ದೇವಸ್ಥಾನದಲ್ಲೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅನಿವಾರ್ಯತೆ ಇದೆ. ಹಾಗಾಗಿ ಲಾಕ್‍ಡೌನ್ ಮುಗಿದ ನಂತರವೇ ದೇವಸ್ಥಾನ ತೆರೆಯಲಾಗುತ್ತದೆ ಎಂದು ಹೇಳಿದರು.

Comments

Leave a Reply

Your email address will not be published. Required fields are marked *