ಸೋಂಕಿತನನ್ನು ಹೊತ್ತು ತಂದ ಅಂಬುಲೆನ್ಸ್ ನೋಡಿ ಓಡಿಹೋದ ಜನರು

ರಾಯಚೂರು: ಕೊರೊನಾ ಸೋಂಕಿತ ಶವವನ್ನು ಹೊತ್ತುತಂದ ಅಂಬುಲೆನ್ಸ್ ನೋಡಿ ಭಯಗೊಂಡ ಜನರು ಓಡಿಹೋಗಿರುವ ಘಟನೆ ರಾಯಚೂರು ತಾಲೂಕಿನ ಪೋತಗಲ್ ಗ್ರಾಮದಲ್ಲಿ ನಡೆದಿದೆ.

ಇಂದು ಕೊರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯನ್ನು ಅಂತ್ಯ ಸಂಸ್ಕಾರ ಮಾಡಲು ಸರ್ಕಾರ ಗುರುತು ಮಾಡಿದ್ದ ಸ್ಥಳಕ್ಕೆ ತರಲಾಗಿದೆ. ಈ ವೇಳೆ ಅಲ್ಲೇ ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಮಹಿಳೆಯರು ಅಂಬುಲೆನ್ಸ್ ಕಂಡು ಓಡಿ ಹೋಗಿದ್ದಾರೆ.

ಪೋತಗಲ್ ಗ್ರಾಮದ ಸರ್ವೇ ನಂ.45ರಲ್ಲಿ ಕೋವಿಡ್‍ನಿಂದ ಸಾವನ್ನಪ್ಪಿದವರ ಅಂತ್ಯಕ್ರಿಯೆಗಾಗಿ ಜಿಲ್ಲಾಡಳಿತ ಸ್ಥಳವನ್ನು ಗುರುತು ಮಾಡಿದೆ. ಆದರೆ ಇಲ್ಲಿ ಸೋಂಕಿತರನ್ನು ಅಂತ್ಯಕ್ರಿಯೆ ಮಾಡಬೇಡಿ ಎಂದು ಪೋತಗಲ್ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಗ್ರಾಮಸ್ಥರ ವಿರೋಧದ ನಡುವೆಯೂ ಅಧಿಕಾರಿಗಳು ಸೋಂಕಿತ ಅಂತ್ಯಕ್ರಿಯೆಯನ್ನು ಸರ್ಕಾರಿ ಜಾಗದಲ್ಲೇ ಮಾಡಿ ಮುಗಿಸಿದ್ದಾರೆ.

Comments

Leave a Reply

Your email address will not be published. Required fields are marked *