ಮಾನಸಿಕ ಅಸ್ವಸ್ಥ ಮಹಿಳೆಗೆ ಬಟ್ಟೆ ತೊಡಿಸಿ ಮಾನವೀಯತೆ ಮೆರೆದ ಪೊಲೀಸ್ ಇಲಾಖೆ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ತಾಳಗುಪ್ಪದಲ್ಲಿ ತಮಿಳುನಾಡು ಮೂಲದ ಮಾನಸಿಕ ಅಸ್ವಸ್ಥ ಮಹಿಳೆ ಬಟ್ಟೆ ಧರಿಸದೆ ವಿವಸ್ತ್ರವಾಗಿ ಓಡಾಡುತ್ತಿದ್ದರು. ಇದನ್ನು ಗಮನಿಸಿದ ಪೊಲೀಸ್ ಇಲಾಖೆ ಮಹಿಳೆಗೆ ಬಟ್ಟೆ ತೊಡಿಸುವ ಮೂಲಕ ಮಾನವೀಯತೆ ಮೆರೆದಿದೆ.

ಬಕ್ರೀದ್ ಹಬ್ಬದ ಪ್ರಯುಕ್ತ ಸಾಗರ ಗ್ರಾಮಾಂತರ ಠಾಣೆಯ ಎಎಸ್‍ಐ ಮೀರಾಬಾಯಿ ತಾಳಗುಪ್ಪದಲ್ಲಿ ಬಂದೋಬಸ್ತ್ ಕರ್ತವ್ಯ ನಿರ್ವಹಿಸಲು ಆಗಮಿಸಿದ್ದರು. ಆಗ ವಿವಸ್ತ್ರದಲ್ಲಿ ಓಡಾಡುತ್ತಿದ್ದ ಮಹಿಳೆಯನ್ನು ಗಮನಿಸಿ ಕೂಡಲೇ ಇತರೆ ಸಿಬ್ಬಂದಿಯ ಸಹಾಯದಿಂದ ಮಹಿಳೆಗೆ ಬಟ್ಟೆ ತೊಡಿಸಿದ್ದಾರೆ.

ಜೊತೆಗೆ ಹಸಿವಿನಿಂದ ಬಳಲುತ್ತಿದ್ದ ಮಹಿಳೆಗೆ ತಿಂಡಿ, ನೀರು ನೀಡಿ ಮಾನಸಿಕವಾಗಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ನಂತರ ಮಹಿಳೆಯನ್ನು ಸಾಗರದಿಂದ ಬೆಂಗಳೂರಿಗೆ ಬಸ್ ಹತ್ತಿಸಿ ಆಕೆಯ ಊರಿಗೆ ಕಳುಹಿಸುವ ಪ್ರಯತ್ನ ಸಹ ಮಾಡಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Comments

Leave a Reply

Your email address will not be published. Required fields are marked *