ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಕ್ವಾರಂಟೈನ್

ಮಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಐವಾನ್ ಡಿಸೋಜಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಮಾಜಿ ಸಚಿವ ಬಿ. ರಮಾನಾಥ ರೈ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ನಾನು ಎರಡು ದಿನಗಳಿಂದ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದೇನೆ. ಆದ್ದರಿಂದ ಈಗಾಗಲೇ ನಿಗದಿಯಾಗಿರುವ ಜನ ಸಾಮಾನ್ಯರ ಭೇಟಿ, ಕ್ಷೇತ್ರದಲ್ಲಿ ನಿಗದಿಯಾಗಿದ್ದ ವಿವಿಧ ಕಾರ್ಯಕ್ರಮಗಳನ್ನು ರದ್ದುಗೊಳಿಸಿರುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಜನರು ಯಾವುದೇ ಸಮಸ್ಯೆಗಳಿದ್ದರೆ ದೂರವಾಣಿ ಮೂಲಕ ನನ್ನನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಐವನ್ ಡಿಸೋಜಾ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಕೆಮ್ಮು, ಜ್ವರ ಮುಂತಾದ ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಐವಾನ್ ಡಿಸೋಜಾ ಹಾಗೂ ಕೋವಿಡ್ ಸೋಂಕಿತರೆಲ್ಲರೂ ಶೀಘ್ರದಲ್ಲಿ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಅದೇ ರೀತಿ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶಕುಂತಲಾ ಟಿ. ಶೆಟ್ಟಿಯವರು ಕೂಡ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

Comments

Leave a Reply

Your email address will not be published. Required fields are marked *