ಅಯೋಧ್ಯೆ ಭೂಮಿ ಪೂಜೆಗೆ ರಾಜ್ಯದ 8 ಮಂದಿಗೆ ಆಹ್ವಾನ

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿ ಪೂಜೆಗೆ ಕ್ಷಣಗಣನೆ ಶುರುವಾಗಿದ್ದು, ಸಿದ್ಧತೆಗಳು ಕೂಡ ಭರ್ಜರಿಯಾಗಿ ನಡೆಯುತ್ತಿವೆ. ಆಯೋಧ್ಯೆಯ ಶ್ರೀರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕರ್ನಾಟಕದ ಎಂಟು ಮಂದಿಗೆ ವಿಶೇಷ ಆಹ್ವಾನ ನೀಡಲಾಗಿದೆ. ಇದನ್ನೂ ಓದಿ: ರಾಮ ಮಂದಿರ ಶಂಕುಸ್ಥಾಪನೆ- ಭರ್ಜರಿಯಾಗಿ ಅಲಂಕೃತಗೊಂಡಿದೆ ಅಯೋಧ್ಯೆ

ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಕರ್ನಾಟಕಕ್ಕೆ ಎಂಟು ಮಂದಿಗೆ ವಿಶೇಷ ಆಹ್ವಾನ ನೀಡಲಾಗಿದೆ. ಆಗಸ್ಟ್ 5ರಂದು ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಲಿದೆ. ಈ ಶುಭ ಸಂದರ್ಭಕ್ಕೆ ಅಯೋಧ್ಯೆ ಸಿಂಗಾರಗೊಂಡಿದೆ. ಕೊರೊನಾ ಹಿನ್ನೆಲೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಸಹ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಮೋದಿ ಬಗ್ಗೆ ಆತಂಕವಾಗ್ತಿದೆ- ಭೂಮಿ ಪೂಜೆಯಿಂದ ದೂರ ಉಳಿದ ಉಮಾಭಾರತಿ

ವಿಶೇಷ ಆಹ್ವಾನಿತರು:
1. ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ
2. ಇಸ್ಕಾನ್ ನ ಮಧುಪಂಡಿತ ದಾಸ್
3. ಶೃಂಗೇರಿ ಮಠದ ವಿಧುಶೇಖರ ಭಾರತೀ ಸ್ವಾಮೀಜಿ
4. ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿ
5. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ
6. ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ
7. ಸುತ್ತೂರು ಮಠದ ಶ್ರೀಗಳು
8. ಆರ್ಟ್ ಆಫ್ ಲಿವಿಂಗ್ ರವಿಶಂಕರ್ ಗುರೂಜಿ

ಆಗಸ್ಟ್ 5ರಂದು ನಡೆಯುವ ಭೂಮಿ ಪೂಜೆಯ ಐತಿಹಾಸಿಕ ಕ್ಷಣಕ್ಕಾಗಿ ರಾಮ ಮಂದಿರ ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸುತ್ತಿದೆ. ಪುರುಷೋತ್ತಮ ರಾಮನ ಮಂದಿರಕ್ಕಾಗಿ ಅಯೋಧ್ಯೆ ಭರ್ಜರಿಯಾಗಿ ಅಲಂಕೃತಗೊಂಡಿದೆ. ಭಾರೀ ಭದ್ರತೆಯನ್ನು ಸಹ ಕೈಗೊಳ್ಳಲಾಗಿದೆ. ಕೊರೊನಾ ಹಿನ್ನೆಲೆ ಸಾಮಾಜಿಕ ಅಂತರ ಪಾಲನೆ ಕಡ್ಡಾಯ ಮಾಡಲಾಗಿದೆ.

Comments

Leave a Reply

Your email address will not be published. Required fields are marked *