ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ – ಕಂಡಕ್ಟರ್ ದೇಹಕ್ಕೆ ಚುಚ್ಚಿದ ಕಬ್ಬಿಣದ ರಾಡ್‍ಗಳು

ಬಳ್ಳಾರಿ: ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಬಸ್ ಕಂಡಕ್ಟರ್ ದೇಹಕ್ಕೆ ಕಬ್ಬಿಣದ ರಾಡ್‍ಗಳು ಚುಚ್ಚಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ಹೊರವಲಯದಲ್ಲಿ ನಡೆದಿದೆ.

ಕೂಡ್ಲಿಗಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಘಟನೆ ನಡೆದಿದೆ. ಕಬ್ಬಿಣದ ರಾಡ್‍ ತುಂಬಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಸ್‍ನ ಎಡಭಾಗದಲ್ಲಿ ಕಂಡಕ್ಟರ್ ಕುಳಿತಿದ್ದ. ಹೀಗಾಗಿ ಡಿಕ್ಕಿ ಹೊಡೆದ ರಭಸಕ್ಕೆ ಕಂಡಕ್ಟರ್ ಹೊಟ್ಟೆಗೆ ಕಬ್ಬಿಣದ ರಾಡ್‍ಗಳು ಚುಚ್ಚಿವೆ.

ತಕ್ಷಣ ಸ್ಥಳೀಯರು ಕಂಡಕ್ಟರ್‌ಗೆ ಚುಚ್ಚಿರುವ ರಾಡ್‍ಗಳನ್ನ ಕತ್ತರಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ಕಂಡಕ್ಟರನ್ನ ದಾಖಲಿಸಲಾಗಿದೆ. ಸದ್ಯಕ್ಕೆ ಕಂಡಕ್ಟರ್ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಈ ಕುರಿತು ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *