ಪ್ರಣಬ್ ಮುಖರ್ಜಿಯ ತೀಕ್ಷ್ಣವಾದ ಬುದ್ಧಿಶಕ್ತಿ, ಕಠಿಣ ಶ್ರಮವನ್ನು ಸದಾ ಮೆಚ್ಚಿದ್ದೆ: ಹೆಚ್‍ಡಿಡಿ

ಬೆಂಗಳೂರು: ಮಾಜಿ ಪ್ರಧಾನಿ ಪ್ರಣಬ್ ಮುಖರ್ಜಿಯವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು ಕಂಬನಿ ಮಿಡಿದಿದ್ದಾರೆ.

ಭಾರತದ 13ನೇ ರಾಷ್ಟ್ರಪತಿ ಮತ್ತು ದೇಶಕಂಡ ಒಳ್ಳೆಯ ರಾಜಕಾರಣಿ ಪ್ರಣಬ್ ಮುಖರ್ಜಿಯವರು ಇಂದು ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಕೊರೊನಾ ಸೋಂಕಿಗೆ ತುತ್ತಾಗಿದ್ದ ಅವರು, ದೆಹಲಿಯ ಆರ್ಮಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಹೆಚ್‍ಡಿಡಿ, ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನದ ಸುದ್ದಿ ತಿಳಿದು ನನಗೆ ಬೇಸರವಾಗಿದೆ. ನಾವು ದಶಕಗಳಿಂದ ಸುದೀರ್ಘ ಸಂಪರ್ಕವನ್ನು ಹೊಂದಿದ್ದವು. ಅವರ ತೀಕ್ಷ್ಣವಾದ ಬುದ್ಧಿಶಕ್ತಿ, ಕಠಿಣ ಶ್ರಮವನ್ನು ನಾನು ಮೆಚ್ಚಿಕೊಂಡಿದ್ದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕೇಳಿಕೊಂಡಿದ್ದಾರೆ.

Comments

Leave a Reply

Your email address will not be published. Required fields are marked *