ನಡು ರಸ್ತೆಯಲ್ಲಿಯೇ ತಾಳಿ ಕಟ್ಟಿದ ಯುವಕ

-ಗ್ರಾಮದಲ್ಲಿ ಬಿಗುವಿನ ವಾತಾವರಣ

ದಾವಣಗೆರೆ: ಯುವಕನೋರ್ವ ಪ್ರೀತಿಸಿದ ಯುವತಿಗೆ ನಡುರಸ್ತೆಯಲ್ಲಿ ತಾಳಿ ಕಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಿಮ್ಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಯುವಕ -ಯುವತಿ ಅನ್ಯ ಜಾತಿಗೆ ಸೇರಿದ್ದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಹೇಮಂತ್ ಮತ್ತು ಯುವತಿ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರ ಜಾತಿ ಬೇರೆ ಆಗಿದ್ದರಿಂದ ಕುಟುಂಬಸ್ಥರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಎರಡು ತಿಂಗಳ ಹಿಂದೆ ಹೇಮಂತ್, ಪೋಷಕರು ನೋಡಿದ ಯುವತಿಯನ್ನ ಮದುವೆ ಆಗಿದ್ದನು. ಇದೀಗ ಹೇಮಂತ್ ಪ್ರೀತಿಸಿದ ಯುವತಿಯನ್ನ ಮದುವೆ ಆಗಿದ್ದಾನೆ.

ಗ್ರಾಮಕ್ಕೆ ಚನ್ನಗಿರಿ ಪೊಲೀಸರು ಭೇಟಿ ನೀಡಿ ಎರಡೂ ಕುಟುಂಬದವರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

 

 

Comments

Leave a Reply

Your email address will not be published. Required fields are marked *