ಶಿಕ್ಷಕರ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ – 4 ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ ಜೆಡಿಎಸ್

ಬೆಂಗಳೂರು: ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ಚುನಾವಣೆಗೆ ತಯಾರಿ ನಡೆಯುತ್ತಿದ್ದು, 4 ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಅಕ್ಟೋಬರ್ 28 ರಂದು ನಡೆಯುವ ಚುನಾವಣೆಗೆ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಆರ್ ಚೌಡರೆಡ್ಡಿ ತೂಪಲ್ಲಿ, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಶಿವಶಂಕರ ಕಲ್ಲೂರ, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ತಿಮ್ಮಯ್ಯ ಪುರ್ಲೆ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಎ. ಪಿ.ರಂಗನಾಥ್ ಹೆಸರುಗಳನ್ನು ತೆನೆ ಪಕ್ಷ ಘೋಷಿಸಿದೆ.

ಭಾರತ ಚುನಾವಣಾ ಆಯೋಗವು ರಾಜ್ಯದಲ್ಲಿ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದಿಂದ ತೆರವಾಗಿರುವ ವಿಧಾನಪರಿಷತ್ತು ಸದಸ್ಯರ ಸ್ಥಾನಗಳನ್ನು ತುಂಬಲು ಅ.28ರಂದು ಚುನಾವಣೆ ನಡೆಸುವುದಾಗಿ ಪ್ರಕಟಿಸಿದೆ. ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಈ ಚುನಾವಣೆಯನ್ನು ಆಯೋಗ ಮುಂದೂಡಿತ್ತು.

Comments

Leave a Reply

Your email address will not be published. Required fields are marked *