ಪತ್ನಿಯ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟ ಪತಿ

-ಸಾವು, ಬದುಕಿನ ಮಧ್ಯೆ ಪತ್ನಿ ಹೋರಾಟ

ಬೆಂಗಳೂರು: ವ್ಯಕ್ತಿಯೊಬ್ಬ ಪತ್ನಿಯ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟು ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಟಿಸಿ ಪಾಳ್ಯದಲ್ಲಿ ನಡೆದಿದೆ.

ಆರೋಪಿ ಸೂರಜ್ ಸಿಂಗ್ ಕೃತ್ಯಕ್ಕೆ ಪತ್ನಿ ಸಾವು-ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ. ಮಹಿಳೆಯ ಪೋಷಕರು ಮಗಳ ಉತ್ತಮ ಭವಿಷ್ಯಕ್ಕಾಗಿ ಅದ್ಧೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಅಲ್ಲದೇ ವರದಕ್ಷಿಣೆ ನೀಡಿ, 15 ಖರ್ಚು ಮಾಡಿ ಮದುವೆ ಮಾಡಿಕೊಟ್ಟಿದ್ದರು.

ಪತಿ ಸೂರಜ್ ಸಿಂಗ್ ವಿವಾಹವಾದ ಆರಂಭದಿಂದಲೇ ತಂದೆಯ ಮನೆಯಿಂದ ಹಣ ತರುವಂತೆ ಹೆಂಡತಿಗೆ ಪೀಡಿಸುತ್ತಿದ್ದನು. ಪಾಪಿ ಪತಿಯ ಹಿಂಸೆ ತಾಳಲಾರದೇ ಪತ್ನಿ ಒಂದೇರಡು ಬಾರಿ ಹಣವನ್ನು ತಂದು ಕೊಟ್ಟಿದ್ದಳು. ಆದರೂ ಆರೋಪಿ ಸೂರಜ್‍ಗೆ ಹೆಂಡತಿಗಿಂತ ಅವಳ ಹಣ, ಆಸ್ತಿಯೇ ದೊಡ್ಡದಾಗಿದ್ದರಿಂದ ನಿತ್ಯ ಗಲಾಟೆ ಮಾಡುತ್ತಿದ್ದ. ಇತ್ತೀಚೆಗಷ್ಟೆ ಮತ್ತೆ ಸೂರಜ್ ಸಿಂಗ್ ಮತ್ತು ಆತನ ತಾಯಿ ಸೇರಿಕೊಂಡು ಗಲಾಟೆ ಮಾಡಿದ್ದಾರೆ.

ಈ ವೇಳೆ ಗಲಾಟೆ ವಿಕೋಪಕ್ಕೆ ಹೋಗಿ ಪತ್ನಿಯ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟಿದ್ದಾನೆ. ಪತಿಯ ನೀಚ ಕೃತ್ಯಕ್ಕೆ ಬಲಿಯಾಗಿರೋ ಪತ್ನಿ ಸಾವು ಬದುಕಿನ ನಡುವೆ ಆಸ್ಪತ್ರೆಯಲ್ಲಿ ಹೋರಾಟ ಮಾಡುತ್ತಿದ್ದಾಳೆ. ಇತ್ತ ಪತ್ನಿಯ ಗುಪ್ತಾಂಗಕ್ಕೆ ಬೆಂಕಿ ಇಟ್ಟ ಪತಿರಾಯ ತಲೆ ಮರೆಸಿಕೊಂಡಿದ್ದಾನೆ.

ಆರೋಪಿ ಪತಿ ಮತ್ತು ಪತ್ನಿ ಬೆಂಗಳೂರಿನ ಟಿಸಿ ಪಾಳ್ಯದಲ್ಲಿ ವಾಸಿಸುತ್ತಿದ್ದರು. ಸದ್ಯಕ್ಕೆ ಘಟನೆ ಬಳಿಕ ತಾಯಿ ಮಗ ಇಬ್ಬರು ತಲೆಮರಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಘಟನೆ ಸಂಬಂಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Comments

Leave a Reply

Your email address will not be published. Required fields are marked *