ಮರು ಬಿಡುಗಡೆಯಾಗಲಿದೆ ‘ಕಾಣದಂತೆ ಮಾಯಾವಾದನು’ ಚಿತ್ರ – ಅಕ್ಟೋಬರ್ 15ಕ್ಕೆ ರೀ ಎಂಟ್ರಿ

ಸುಮಾರು ಏಳು ತಿಂಗಳಿಂದ ಚಿತ್ರಮಂದಿರದಲ್ಲಿ ಸಿನಿಮಾ ನೋಡದೆ ಬೇಸರದಲ್ಲಿದ್ದ ಕನ್ನಡ ಸಿನಿ ರಸಿಕರಿಗೆ ಅಕ್ಟೋಬರ್ 15ರಿಂದ ಚಿತ್ರಮಂದಿರದಲ್ಲಿ ಸಿನಿಮಾ ನೋಡೋ ಭಾಗ್ಯ ಸಿಕ್ಕಿದೆ. ಚಿತ್ರಮಂದಿರ ಓಪನ್‍ಗೆ ಸರ್ಕಾರ ಅನುಮತಿ ನೀಡಿದ್ದೇ ತಡ ಹಲವು ಚಿತ್ರತಂಡಗಳು ಸಿನಿಮಾ ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದ್ರ ನಡುವೆ ಕೊರೊನಾ ಹೊಡೆತಕ್ಕೆ ಸಿಕ್ಕಿ ಕಡಿಮೆ ದಿನ ಪ್ರದರ್ಶನ ಕಂಡ ಚಿತ್ರಗಳು ಒಂದಾದ ಮೇಲೊಂದರಂತೆ ರೀ ರಿಲೀಸ್‍ಗೆ ರೆಡಿಯಾಗುತ್ತಿವೆ. ಈ ಸಾಲಿನಲ್ಲಿ ವಿಕಾಸ್ ನಾಯಕ ನಟನಾಗಿ ನಟಿಸಿರುವ ‘ಕಾಣದಂತೆ ಮಾಯವಾದನು’ ಚಿತ್ರ ಕೂಡ ಸೇರ್ಪಡೆಯಾಗಿದೆ.

ಅಕ್ಟೋಬರ್ 15ರಂದೇ ‘ಕಾಣದಂತೆ ಮಾಯವಾದನು’ ಚಿತ್ರ ಪ್ರೇಕ್ಷಕರಿಗೆ ಮನರಂಜನೆ ನೀಡಲು ಸಿದ್ಧವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಚಿತ್ರದ ನಿರ್ದೇಶಕ ರಾಜ್ ಪಾತಿಪಾಟಿ ಹಾಗೂ ನಟ ವಿಕಾಸ್ ಸಿನಿಮಾಗೆ ಒಳ್ಳೆಯ ರಿವೀವ್ ಬಂದಿತ್ತು. ಜನರು ಮೆಚ್ಚಿಕೊಂಡಿದ್ರು. ಬಟ್ ನಾವು ಒಂದಿಷ್ಟು ಸೀನ್‍ಗಳನ್ನು ತುಂಬಾ ಟ್ರಿಮ್ ಮಾಡಿದ್ವಿ. ಕಥೆಗೆ ಹೆಚ್ಚು ಇಂಪಾರ್ಟೆನ್ಸ್ ಕೊಟ್ಟು ಕೆಲವು ಸೀನ್‍ಗಳನ್ನು ಟ್ರಿಮ್ ಮಾಡಿದ್ವಿ. ಆದ್ರೀಗ ಒಂದಿಷ್ಟು ಬದಲಾವಣೆಯೊಂದಿಗೆ ಮರು ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದೇವೆ. ಜನರಿಗೆ ಖಂಡಿತ ಮೊದಲಿಗಿಂತ ಈ ಬಾರಿ ಹೆಚ್ಚಾಗಿ ಸಿನಿಮಾ ಇಷ್ಟವಾಗುತ್ತೆ ಅನ್ನೋದು ಚಿತ್ರತಂಡದ ಅಭಿಪ್ರಾಯ.

ಅಕ್ಟೋಬರ್ 15ಕ್ಕೆ ಹತ್ತಕ್ಕೂ ಹೆಚ್ಚು ಚಿತ್ರಮಂದಿರದಲ್ಲಿ ‘ಕಾಣದಂತೆ ಮಾಯವಾದನು’ ಚಿತ್ರ ಮರುಬಿಡುಯಾಗುತ್ತಿದೆ. ಚಿತ್ರದಲ್ಲಿ ಲವರ್ ಬಾಯ್, ಆಕ್ಷನ್ ಹೀರೋ ಆಗಿ ವಿಕಾಸ್ ರಮ್ಮಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕ ನಟಿಯಾಗಿ ಸಿಂಧೂ ಲೋಕನಾಥ್ ನಟಿಸಿದ್ದಾರೆ. ಲವ್ ಫ್ಯಾಂಟಸಿ, ಹಾರಾರ್, ಆಕ್ಷನ್, ಸಸ್ಪೆನ್ಸ್ ಎಲ್ಲಾ ಎಲಿಮೆಂಟ್‍ಗಳು ಚಿತ್ರದಲ್ಲಿದ್ದು, ಅಚ್ಯುತ್ ಕುಮಾರ್, ಭಜರಂಗಿ ಲೋಕಿ, ಚಿತ್ರದ ತಾರಾಬಳಗದಲ್ಲಿದ್ದಾರೆ. ಚಂದ್ರಶೇಖರ್ ನಾಯ್ಡು, ಸೋಮ್ ಸಿಂಗ್, ಪುಷ್ಪ ಸೋಮ್ ಸಿಂಗ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಅಂದ್ಹಾಗೆ ಈ ಸಿನಿಮಾ ಜನವರಿ 31ಕ್ಕೆ ಮೊದಲು ಬಿಡುಗಡೆಯಾಗಿತ್ತು.

Comments

Leave a Reply

Your email address will not be published. Required fields are marked *