ಬೆಂಗಳೂರಿನ ಬಾರ್‌ ಮಾಲೀಕನ ಮೇಲೆ ಶೂಟೌಟ್‌

ಬೆಂಗಳೂರು: ಗುರುವಾರ ರಾತ್ರಿ ನಗರದ ರೆಸ್ಟ್ ಹೌಸ್ ಪಾರ್ಕ್ ರಸ್ತೆಯಲ್ಲಿ ಮಾಲೀಕನ ಮೇಲೆ ಶೂಟೌಟ್‌ ಮಾಡಲಾಗಿದೆ.

ಡ್ಯುಯೆಟ್ ಬಾರ್ ಮಾಲೀಕನಾಗಿರುವ ಮನೀಷ್ ಮೇಲೆ ಎರಡು ಬೈಕಿನಲ್ಲಿ ಬಂದ ಮೂವರು ವ್ಯಕ್ತಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಮನೀಷ್‌ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ನಡೆದ ಸ್ಥಳದಲ್ಲಿ ಒಂದು ಡಿಯೋ ಬೈಕ್ ಬಿಟ್ಟು ಹೋಗಿದ್ದಾರೆ. ಪಬ್ ನಿಂದ ಇನ್ನೂರು ಮೀಟರ್ ದೂರದಲ್ಲಿ ಮತ್ತೊಂದು ಬೈಕ್ ಮತ್ತು ಡಬ್ಬಲ್ ಬ್ಯಾರಲ್ ಗನ್ ಎಸೆದು ಆರೋಪಿಗಳು ಪರಾರಿಯಾಗಿದ್ದಾರೆ.

ಬನ್ನಂಜೆ ರಾಜನ‌ ಆಪ್ತನಾಗಿದ್ದ ಮನೀಶ್ ಶೆಟ್ಟಿ ಮೇಲೆ ಮಂಗಳೂರು ಸೇರಿ ಬಾಂಬೆಯಲ್ಲೂ ಹಲವು ಕೇಸ್ ಗಳಿವೆ.

ಸ್ಥಳಕ್ಕೆ ಕಬ್ಬನ್ ಪಾರ್ಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮತ್ತು ಕೇಂದ್ರ ವಿಭಾಗ ಡಿಸಿಪಿ ಅನುಚೇತ್ ಭೇಟಿ ನೀಡಿದ್ದಾರೆ.

Comments

Leave a Reply

Your email address will not be published. Required fields are marked *