ಸಿಎಂ ಬಿಎಸ್‍ವೈಗೆ ಕರೆ ಮಾಡಿ ಪ್ರವಾಹ ಪರಿಸ್ಥಿತಿ ಮಾಹಿತಿ ಪಡೆದ ಪ್ರಧಾನಿ ಮೋದಿ

ಬೆಂಗಳೂರು: ಮಹಾ ಜಲಪ್ರಳಯಕ್ಕೆ ಭೀಮಾ, ಕೃಷ್ಣಾ ನದಿ ಪಾತ್ರದ ಬಹುತೇಕ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಮುಳುಗಿವೆ. ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಸ್ಥಿತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ.

ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕರ್ನಾಟಕದ ಮಳೆ, ನೆರೆ ಪರಿಸ್ಥಿತಿ ಬಗ್ಗೆ ಸಿಎಂ ಯಡಿಯೂರಪ್ಪ ಜೊತೆ ಮಾತನಾಡಿ ಮಾಹಿತಿ ಪಡೆದಿದ್ದೇನೆ. ಪ್ರವಾಹ ಬಾಧಿತ ಜಿಲ್ಲೆಗಳ ಸಹೋದರ-ಸಹೋದರಿಯರ ಜೊತೆ ನಾವಿದ್ದೇವೆ. ರಕ್ಷಣೆ ಮತ್ತು ಪರಿಹಾರ ಕಾರ್ಯಕ್ಕೆ ಕೇಂದ್ರದಿಂದ ಅಗತ್ಯ ಇರುವ ಎಲ್ಲಾ ಸಹಾಯ ಸಿಗಲಿದೆ ಎಂದು ಭರವಸೆ ನೀಡಿದ್ದಾರೆ.


ಆದರೆ ಇದಕ್ಕೂ ಮುನ್ನ ಕನ್ನಡಿಗರು ಅಂದರೇ ಇಷ್ಟ ಇಲ್ವಾ, ನಮ್ಮ ಸಿಎಂ ಬಿಎಸ್ ಯಡಿಯೂರಪ್ಪ ಅಂದರೇ ನಿಮಗೆ ಇಷ್ಟ ಇಲ್ವಾ? ಆಂಧ್ರಪ್ರದೇಶ, ತೆಲಂಗಾಣದ ಸಿಎಂಗಳ ಜೊತೆ ಮಾತನಾಡಿ ಪರಿಹಾರದ ಭರವಸೆ ನೀಡಿದ್ದೀರಾ? ಕರ್ನಾಟಕದ ಬಗ್ಗೆ ನಿರ್ಲಕ್ಷ್ಯ ಯಾಕೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿ, ಪ್ರಧಾನಿಗೆ ಟ್ಯಾಗ್ ಮಾಡಿದ್ದರು.

Comments

Leave a Reply

Your email address will not be published. Required fields are marked *