ಉಮಾಶ್ರೀ ಮನೆಯಲ್ಲಿ ಕಳ್ಳತನ- ಭಾರೀ ಪ್ರಮಾಣದ ಚಿನ್ನಾಭರಣ, ವಸ್ತುಗಳ ಹೊತ್ತೊಯ್ದಿರುವ ಶಂಕೆ

ಬಾಗಲಕೋಟೆ: ನಟಿ, ಮಾಜಿ ಸಚಿವೆ ಉಮಾಶ್ರೀ ಅವರ ಮನೆಯಲ್ಲಿ ಕಳ್ಳತನಾಗಿದೆ ಎಂಬ ಮಾಹಿತಿ ಇದೀಗ ಲಭ್ಯವಾಗಿದ್ದು, ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ ವಸ್ತುಗಳು ಕಳ್ಳತನವಾಗಿವೆ ಎನ್ನಲಾಗಿದೆ.

ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ವಿದ್ಯಾನಗರದಲ್ಲಿರುವ ಮನೆ ಕಳ್ಳತನ ನಡೆದಿದ್ದು, ಮನೆಯ ಬಾಗಿಲು ಮುರಿದು, ಅಪಾರ ಪ್ರಮಾಣದ ವಸ್ತು ಮತ್ತು ಹಣ ಕಳ್ಳತನ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆಯುತ್ತಿದ್ದಂತೆ ಬನಹಟ್ಟಿ ಸಿಪಿಐ ಕರುಣೇಶಗೌಡ ಹಾಗೂ ತೇರದಾಳ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ರಾತ್ರಿ 2 ಗಂಟೆ ನಂತರ ಕಳ್ಳತನ ನಡೆದಿದ್ದು, ಒಬ್ಬನೇ ಬಂದಿದ್ದ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅಲ್ಲದೆ ಅಪಾರ ಪ್ರಮಾಣದ ಚಿನ್ನಾಭರಣ, ವಸ್ತುಗಳು ಕಳ್ಳತನವಾಗಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಬಳಿಕ ಪೊಲೀಸರು ಪರಿಶೀಲನೆ ನಡೆಸಿದ್ದು, ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ. ಈ ಕುರಿತು ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರಿಂದಾಗಿ ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

Comments

Leave a Reply

Your email address will not be published. Required fields are marked *