ತಾಂತ್ರಿಕ ದೋಷ – ಎಪಿಎಂಸಿ ಮೈದಾನದಲ್ಲಿ ಸೇನಾ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ

ಕಾರವಾರ: ಇಂಜಿನ್‍ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಭಾರತೀಯ ನೌಕಾದಳಕ್ಕೆ ಸೇರಿದ ಎನ್-741 ಹೆಲಿಕಾಪ್ಟರ್, ಶಿರಸಿ ತಾಲೂಕಿನ ದಾಸನಕೊಪ್ಪ ಗ್ರಾಮದ ಎಪಿಎಂಸಿ ಮೈದಾನದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ.

ಬೆಂಗಳೂರಿನಿಂದ ಗೋವಾದತ್ತ ಹೆಲಿಕಾಪ್ಟರ್ ತೆರಳುತಿದ್ದು, ಈ ವೇಳೆ ಇಂಜಿನ್‍ನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ನಂತರ ಪೈಲೆಟ್ ದಾಸನಕೊಪ್ಪದ ಮೈದಾನದಲ್ಲಿ ಜೀವರಕ್ಷಣೆಗಾಗಿ ಹೆಲಿಕಾಪ್ಟರ್ ಅನ್ನು ಕೆಳಗಿಳಿಸಿದ್ದಾರೆ. ಇಬ್ಬರು ಪೈಲಟ್, ಓರ್ವ ಕಮಾಂಡಿಂಗ್ ಆಫೀಸರ್ ಈ ಹೆಲಿಕಾಪ್ಟರಿನಲ್ಲಿ ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಪೈಲೆಟ್ ಸಮಯ ಪ್ರಜ್ಞೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಏಕಾಏಕಿ ಹೆಲಿಕಾಪ್ಟರ್ ಇಳಿದಿದ್ದು ಕಂಡು ಗ್ರಾಮಸ್ಥರು ದಿಗ್ಭ್ರಮೆಗೊಳಗಾಗಿದ್ದು, ಪೈಲಟ್‍ಗಳು ಹೊರಬರುತ್ತಿದ್ದಂತೆ ಹೆಲಿಕಾಪ್ಟರ್ ನೋಡಲು ನೂರಾರು ಜನ ಜಮಾಯಿಸಿದ್ದರು. ಹೆಲಿಕಾಪ್ಟರ್ ನಲ್ಲಿ ದೋಷವಿದ್ದಿದ್ದರಿಂದ ಸರಿಪಡಿಸಲು ಗೋವಾದಿಂದ ಶಿರಸಿಗೆ ತಾಂತ್ರಿಕ ತಜ್ಞರು ಹೆಲಿಕಾಪ್ಟರ್ ಮೂಲಕ ಆಗಮಿಸುತಿದ್ದು, ನಂತರ ಹೆಲಿಕಾಪ್ಟರಿನ ಯಾವ ಭಾಗದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ ಎಂಬುದು ತಿಳಿದು ಬರಲಿದೆ.

Comments

Leave a Reply

Your email address will not be published. Required fields are marked *