ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಧ್ರುವ ಸರ್ಜಾ ಕೂದಲು ದಾನ

ಬೆಂಗಳೂರು: ಸ್ಯಾಂಡಲ್‍ವುಡ್ ನಟ, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಕ್ಯಾನ್ಸರ್ ಪೀಡಿತ ಮಕ್ಕಳಿಗೆ ತನ್ನ ಕೂದಲನ್ನು ದಾನ ಮಾಡಿದ್ದಾರೆ.

ಧ್ರುವ ಅವರು ‘ಪೊಗರು’ ಚಿತ್ರಕ್ಕಾಗಿ ಕಳೆದ 2 ವರ್ಷದಿಂದ ಕೂದಲು ಬಿಟ್ಟಿದ್ದರು. ಇದೀಗ ಅವರ ಕೂದಲು ಹಾಗೂ ಗಡ್ಡಕ್ಕೆ ಕತ್ತರಿ ಬಿದ್ದಿದೆ. ಸಿನಿಮಾ ಕಂಪ್ಲೀಟ್ ಆದ ಹಿನ್ನೆಲೆಯಲ್ಲಿ ಧ್ರುವ ಅವರು ಹೇರ್ ಕಟ್ ಮಾಡಿಸಿದ್ದಾರೆ. ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ಈ ಕೂದಲು ಕೊಡೋದಾಗಿ ಧ್ರುವ ಹೇಳಿದ್ದಾರೆ.

ಧ್ರುವ ಸರ್ಜಾ ನಟನೆಯ ‘ಪೊಗರು’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನಂದಕಿಶೋರ್ ನಿರ್ದೇಶನದ ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಈ ಸಿನಿಮಾ ಬಿಡುಗಡೆಯನ್ನು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

ಈ ಹಿಂದೆ ಚಿತ್ರ ಬಿಡುಗಡೆಯ ಬಗ್ಗೆ ಮಾತನಾಡಿದ್ದ ನಂದಕಿಶೋರ್, ‘ಪೊಗರು’ ಚಿತ್ರವನ್ನು ಡಿಸೆಂಬರ್ 25ರ ಕ್ರಿಸ್‍ಮಸ್ ಹಬ್ಬದಂದು ಅಥವಾ ಜನವರಿ ತಿಂಗಳ ಸಂಕ್ರಾಂತಿ ಹಬ್ಬದಂದು ರಿಲೀಸ್ ಮಾಡುವುದಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ. ಸಿನಿಮಾದಲ್ಲಿ ಧ್ರುವ ಸರ್ಜಾ ಅವರು ಕೂದಲು, ಗಡ್ಡ ಬಿಟ್ಟುಕೊಂಡು ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದರು.

Comments

Leave a Reply

Your email address will not be published. Required fields are marked *