3 ಎಕರೆಯಲ್ಲಿ ಬೆಳೆದಿದ್ದ ಸೋಯಾಬಿನ್ ಫಸಲು ಸುಟ್ಟು ಕರಕಲು

– 2ಲಕ್ಷಕ್ಕೂ ಅಧಿಕ ಮೌಲ್ಯದ ಬೆಳೆಗೆ ಬೆಂಕಿ

ಹಾವೇರಿ: ಸೋಯಾಬಿನ್ ಫಸಲಿನ ಬಣವೆಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಹಾವೇಯ ಹಾನಗಲ್ ತಾಲೂಕಿನ ಅಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ರೈತ ಶಂಕ್ರಪ್ಪ ಶೆಟ್ಟರ ಬೆಳೆದಿದ್ದ ಸೋಯಾಬಿನ್ ರಾಶಿ ಮಾಡಲು ಹಾಕಲಾಗಿತ್ತು. ಆದರೆ ರಾತ್ರೋರಾತ್ರಿ ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚಿ ಫಸಲನ್ನು ಸುಟ್ಟು ಹಾಕಿದ್ದರೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಸೋಯಾಬಿನ್ ಫಸಲನ್ನು ಕೊಯ್ಲು ಮಾಡಿ ಜಮೀನಿನಲ್ಲಿ ರಾಶಿ ಹಾಕಲಾಗಿತ್ತು. ಆದರೆ ಯಾರೋ ದುಷ್ಕರ್ಮಿಗಳು ರಾತ್ರಿ ಬೆಂಕಿ ಹಚ್ಚಿದ್ದರಿಂದ ಸೋಯಾಬಿನ್ ಫಸಲು ಸಂಪೂರ್ಣ ಸುಟ್ಟು ಕರಕಲಾಗಿದೆ. ಇದರಿಂದ ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ಸೋಯಾಬಿನ್ ಫಸಲು ಸುಟ್ಟು ಹೋಗಿದೆ ಎಂದು ರೈತ ಶಂಕ್ರಪ್ಪ ಕಣ್ಣಿರಿಟ್ಟಿದ್ದಾರೆ.

Comments

Leave a Reply

Your email address will not be published. Required fields are marked *