ಜ್ಞಾನದೀವಿಗೆಗೆ ಬಿಜೆಪಿ ಮಾಜಿ ಶಾಸಕ ಎಸ್.ಮುನಿರಾಜು ನೆರವು

ಬೆಂಗಳೂರು: ಸರ್ಕಾರಿ ಶಾಲೆಯ ಬಡ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ನೆರವಾಗಲು ರೋಟರಿ ಸಹಾಯೋಗದಿಂದಿಗೆ ನಡೆಸುತ್ತಿರುವ ಪಬ್ಲಿಕ್ ಟಿವಿಯ ಜ್ಞಾನದೀವಿಗೆ ಕಾರ್ಯಕ್ರಮಕ್ಕೆ ಬೆಂಗಳೂರಿನ ಟಿ.ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಎಸ್.ಮುನಿರಾಜು ತಮ್ಮ ನೆರವಿನ ಹಸ್ತ ನೀಡಿದ್ದಾರೆ.

ಇಬ್ಬರು ವಿದ್ಯಾರ್ಥಿಗಳಿಗೆ ಒಂದು ಟ್ಯಾಬ್‌ನೊಂದಿಗೆ ಆರಂಭವಾದ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಎಸ್ ಮುನಿರಾಜು ಅವರು 40 ವಿದ್ಯಾರ್ಥಿಗಳಿಗೆ ನೆರವಾಗುವಂತೆ 20 ಟ್ಯಾಬ್‌ಗಳನ್ನು ನೀಡಲು ಮುಂದಾಗಿದ್ದಾರೆ.

ಪಠ್ಯವನ್ನು ಒಳಗೊಂಡ ಎಲೆಕ್ಟ್ರಾನಿಕ್ ಟ್ಯಾಬ್‌ ನೀಡುವುದು ಉತ್ತಮ ಕಾರ್ಯಕ್ರಮ. ಈ ಪ್ರಯೋಜನವನ್ನು ಮಕ್ಕಳು ಸದುಪಯೋಗ ಪಡಿಸಿಕೊಂಡು ಉನ್ನತ ವಿದ್ಯಾಭ್ಯಾಸಕ್ಕೆ ಮಕ್ಕಳು ಮುಂದಾಗಿ, ಗ್ರಾಮ, ಶಾಲೆ, ಗುರುಗಳು, ತಂದೆತಾಯಿಗೆ ಉತ್ತಮ ಕೀರ್ತಿ ಹೆಸರು ಬರುವಂತೆ ಮುಂದಾಗಬೇಕು. ನಾನು ಸಹ ಸರ್ಕಾರಿ ಶಾಲೆಯಲ್ಲಿ ಓದಿ ಬೆಳೆದಿದ್ದೇನೆ. ಹೀಗಾಗಿ ನಾನು ಕಿರು ಸಹಾಯವನ್ನು ನೀಡುತ್ತಿರುವುದಾಗಿ ಮುನಿರಾಜು ತಿಳಿಸಿದರು.

Comments

Leave a Reply

Your email address will not be published. Required fields are marked *