ಮಾಜಿ ಸಚಿವ ಹೆಚ್.ಟಿ ಕೃಷ್ಣಪ್ಪ ನಿಧನ

ಬೆಂಗಳೂರು: ಮಾಜಿ ಸಚಿವ ಹೆಚ್.ಟಿ ಕೃಷ್ಣಪ್ಪ(92) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ದಿ. ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಸಚಿವರಾಗಿದ್ದ ಕೃಷ್ಣಪ್ಪ ಅವರು ಮಂಡ್ಯ ಜಿಲ್ಲೆಯ ನಾಗಮಂಗಲ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಹೆಗಡೆ ಸಂಪಟುದಲ್ಲಿ ಆರೋಗ್ಯ, ರೇಷ್ಮೆ, ಅಬಕಾರಿ ಖಾತೆಗಳನ್ನು ನಿಭಾಯಿಸಿದ್ದರು.

ಮೃತರ ಅಂತ್ಯಕ್ರಿಯೆ ಇಂದು ಸಂಜೆ 5 ಗಂಟೆ ಸುಮಾರಿಗೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಬಿಟಿ ಬಡಾವಣೆಯ ಹೇಮಾವತಿ ಕ್ವಾಟ್ರಸ್ ಮುಂಭಾಗದಲ್ಲಿರುವ ಅವರ ಜಮೀನಿನಲ್ಲೇ ನಡೆಯಲಿದೆ ಎಂಬುದಾಗಿ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಕೃಷ್ಣಪ್ಪ ಅವರ ನಿಧನಕ್ಕೆ ಗಣ್ಯರು ಸೇರಿದಂತೆ ಅವರ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

Comments

Leave a Reply

Your email address will not be published. Required fields are marked *