ಜಾರಕಿಹೊಳಿಗೆ ಎಲ್ಲೆಲ್ಲಿ, ಏನೇನು ನೋವಿದೆಯೋ ಗೊತ್ತಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರಿಗೆ ಏನೇನು, ಎಲ್ಲೆಲ್ಲಿ ನೋವಿದೆಯೋ ಗೊತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹರಿಹಾಯ್ದರು.

ಈ ಕುರಿತು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಅನಾರೋಗ್ಯದ ನೆಪ ಹೇಳಿ ವಿಚಾರಣೆಗೆ ಗೈರಾದ ಬಗ್ಗೆ ಹೇಳಿದರು. ಪಾಪ ಅವರ ಕಷ್ಟ, ಸುಖ, ಏನೇನು, ಎಲ್ಲೆಲ್ಲಿ ನೋವಿದೆಯೋ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.

ಒಳ್ಳೆಯ ಪೊಲೀಸ್ ಅಧಿಕಾರಿಗಳಿದ್ದಾರೆ ಯಾಕೆ ಹೀಗೆ ಮಾಡುತ್ತಿದ್ದಾರೆ ತಿಳಿತಿಲ್ಲ. ಈ ಬಗ್ಗೆ ಈಗ ಮಾತನಾಡುವುದು ಬೇಡ. ಯಾವ ದಿಕ್ಕಿನಲ್ಲಿ ಏನು ನಡೆಯುತ್ತಿದೆ ಎಂಬುದು ನನಗೆ ಗೊತ್ತಿದೆ. ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳು ಮಾತನಾಡಿದ್ದಾರೆ. ಸಮಯ ಬಂದಾಗ ನಾನು ಮಾತನಾಡುತ್ತೇನೆ ಎಂದು ಹೇಳಿದರು.

ಸಚಿವ ಈಶ್ವರಪ್ಪ ಸಿಎಂ ವಿರುದ್ಧ ಹೈ ಕಮಾಂಡ್ ಹಾಗೂ ರಾಜ್ಯಪಾಲರಿಗೆ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದಿದೆ. ಅಧಿಕಾರಿಗಳು ಕೆಲಸ ಮಾಡಲು ಆಗುತ್ತಿಲ್ಲ, 3,6 ತಿಂಗಳಿಗೆ ಅಧಿಕಾರಿಗಳು ಬದಲಾಗುತ್ತಿದ್ದಾರೆ. ಹೀಗಿರುವಾಗ ಆಡಳಿತ ಸುಗಮವಾಗಿ ನಡೆಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

Comments

Leave a Reply

Your email address will not be published. Required fields are marked *