ರೇಣುಕಾಚಾರ್ಯ ಆಸ್ಪತ್ರೆಗೆ ಭೇಟಿ- ಕೊರೊನಾ ಸ್ಥಿತಿಗತಿ, ಸಿದ್ಧತೆ ಬಗ್ಗೆ ವೈದ್ಯರೊಂದಿಗೆ ಚರ್ಚೆ

ದಾವಣಗೆರೆ: ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಹೊನ್ನಾಳಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಕೊರೊನಾ ಸ್ಥಿತಿಗತಿ ಕುರಿತು ಹಾಗೂ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವೈದ್ಯರೊಂದಿಗೆ ಚರ್ಚೆ ನಡೆಸಿದ್ದಾರೆ.

ಹೊನ್ನಾಳಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ಅವರು, ವೈದ್ಯರೊಂದಿಗೆ ಮಾತುಕತೆ ನಡೆಸಿದರು. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆ ಸೌಲಭ್ಯ, ಔಷಧಿ ಹಾಗೂ ಬೆಡ್ ವ್ಯವಸ್ಥೆ ವೀಕ್ಷಿಸಿದರು. ಅಲ್ಲದೆ ಐಸಿಯು ವಾರ್ಡ್ ಹಾಗೂ ಜನರಲ್ ವಾರ್ಡ್‍ಗಳ ಕುರಿತು ಸಹ ವೈದ್ಯರಿಂದ ಮಾಹಿತಿ ಪಡೆದರು.

ಮಾತುಕತೆ ಬಳಿಕ 22ಕ್ಕೂ ಹೆಚ್ಚು ಸೋಂಕಿತರಿಗೆ ಪ್ರತ್ಯೇಕ ವಾರ್ಡ್‍ಗಳಲ್ಲಿ ನೀಡುವಂತೆ ಸೂಚಿಸಲಾಗಿದ್ದು, ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ವೈದ್ಯರಿಗೆ ಸೂಚಿಸಿದರು. ಪ್ರತಿ ವಾರ್ಡ್‍ಗೆ ಭೇಟಿ ನೀಡಿ ಕೈಗೊಂಡಿರುವ ಕ್ರಮಗಳನ್ನು ವೀಕ್ಷಿಸಿದರು.

Comments

Leave a Reply

Your email address will not be published. Required fields are marked *