ಕಾಂಗ್ರೆಸ್‍ನ ಎಲ್ಲಾ ನಾಯಕರು ಜನರಿಗೆ ನೆರವಾಗಬೇಕು- ರಾಹುಲ್ ಗಾಂಧಿ

ನವದೆಹಲಿ: ಕೊರೊನ ಸೋಂಕು ನಿಂಯತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆಗಾಗ ಕೆಂದ್ರ ಸರ್ಕಾರದ ವಿರುದ್ಧವಾಗಿ ಟ್ವೀಟ್ ಮಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಕಾಂಗ್ರೆಸ್‍ನ ಎಲ್ಲಾ ನಾಯಕರು ಜನರಿಗೆ ನೆರವಾಗುವಂತೆ ಮನವಿ ಮಾಡಿ ಟ್ವೀಟ್ ಮಾಡಿದ್ದಾರೆ.

ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ. ಈ ಸಂದರ್ಭದಲ್ಲಿ ಜನರ ಬಗ್ಗೆ ಮಾತನಾಡುವುದು ಅವಶ್ಯಕವಾಗಿದೆ. ಕಠೀಣ ಪರಿಸ್ಥಿತಿಯಲ್ಲಿ ಜವಾಬ್ದಾರಿಯುತ ನಾಯಕರ ಅವಶ್ಯಕತೆ ಇದೆ. ಕಾಂಗ್ರೆಸ್‍ನ ಎಲ್ಲಾ ಸದಸ್ಯರು ರಾಜಕೀಯ ಕೆಲಸವನ್ನು ಬಿಟ್ಟು ಜನರಿಗೆ ನೆರವನ್ನು ಒದಗಿಸಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕವಾಗಿ ಮನವಿ ಮಾಡಿದ್ದಾರೆ.

ಕೊರೊನಾ ಎರಡನೇ ಅಲೆ ದೇಶವನ್ನು ಬೆಚ್ಚಿ ಬೀಳಿಸುತ್ತಿದೆ. ಎಲ್ಲಾ ರೀತಿಯ ನೆರವು ನೀಡಲು ಸಾರ್ಕಾರ ಶ್ರಮಿಸುತ್ತಿದೆ ಎಂದು ಮನ್‍ಕಿಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Comments

Leave a Reply

Your email address will not be published. Required fields are marked *