ಕೊರೊನ ಸೋಂಕಿತರಿದ್ದ ಅಂಬುಲೆನ್ಸ್ ಗೆ ವಾಹನ ಡಿಕ್ಕಿ, ಬೆಂಕಿ – ಮೂವರ ಸ್ಥಿತಿ ಗಂಭೀರ

ನೆಲಮಂಗಳ: ಕೊರೊನಾ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಅಂಬುಲೆನ್ಸ್ ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅಂಬುಲೆನ್ಸ್ ಹೊತ್ತಿ ಉರಿದ ಘಟನೆ ನೆಲಮಂಗಲ ತಾಲೂಕಿನ ಎಡೆಹಳ್ಳಿ ಬಳಿ ನಡೆದಿದೆ.

ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ, ನೆಲಮಂಗಲ ತಾಲೂಕಿನ ಎಡೆಹಳ್ಳಿ ಬಳಿ ಕೊರೊನಾ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಅಂಬುಲೆನ್ಸ್ ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಅಂಬುಲೆನ್ಸ್‍ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಪರಿಣಾಮ ಅಂಬುಲೆನ್ಸ್ ನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ತುಮಕೂರು ಮಾರ್ಗದಿಂದ ಬೆಂಗಳೂರು ಕಡೆ ಅಂಬುಲೆನ್ಸ್ ಬರುತ್ತಿದ್ದ ವೇಳೆ ಘಟನೆ ನಡೆದಿದ್ದು, ಅಂಬುಲೆನ್ಸ್ ನಲ್ಲಿ ನಾಲ್ಕು ಜನ ಸೋಂಕಿತರು ಮತ್ತು ಚಾಲಕ ಸೇರಿ ಐವರು ಇದ್ದ ಬಗ್ಗೆ ಮಾಹಿತಿ ಇದೆ. ಕೂಡಲೇ ಸ್ಥಳೀಯರು ಅಂಬುಲೆನ್ಸ್ ಗೆ ತಗುಲಿದ್ದ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ.

Comments

Leave a Reply

Your email address will not be published. Required fields are marked *