ಕೊರೊನಾ ವಿರುದ್ಧ ಹೋರಾಡಲು ಲಾಕ್‍ಡೌನ್ ಒಂದೇ ಅಸ್ತ್ರ: ರಾಹುಲ್ ಗಾಂಧಿ

ನವದೆಹಲಿ: ಲಾಕ್‍ಡೌನ್ ನಿಂದ ದೇಶದ ಜನರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ ಎಂದು ಈ ಹಿಂದೆ ಹೇಳಿದ್ದ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಇದೀಗ ಕೊರೊನಾ ವಿರುದ್ಧ ಹೋರಾಡಲು ಲಾಕ್‍ಡೌನ್ ಮಾಡುವುದು ಸೂಕ್ತ ಎಂದು ಹೇಳಿದ್ದಾರೆ.

ಕೋವಿಡ್ ವಿರುದ್ಧ ಹೋರಾಡಲು ಲಾಕ್‍ಡೌನ್ ಒಂದೇ ಅಸ್ತ್ರವಾಗಿದೆ. ನ್ಯಾಯ ಯೋಜನೆ ಜಾರಿ ಜೊತೆ ಲಾಕ್‍ಡೌನ್ ಜಾರಿ ಮಾಡಿ. ಸರ್ಕಾರದ ನಿಷ್ಕ್ರಿಯತೆಯಿಂದ ಅಮಾಯಕರು ಸಾಯುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ದೆಶದಲ್ಲಿ ಕೊರೊನಾ ಸೋಂಕಿನಿಂದ ಕೇಂದ್ರ ಸರ್ಕಾರ ಕಳೆದ ಬಾರಿ ಲಾಕ್‍ಡೌನ್ ಜಾರಿಗೊಳಿಸಿದ್ದಾಗ ಯೋಜಿತವಲ್ಲದ ಲಾಕ್‍ಡೌನ್‍ನಿಂದಾಗಿ ದೇಶದಲ್ಲಿ ವಲಸಿಗರು ಸಂಕಷ್ಟವನ್ನು ಅನುಭವಿಸಿದ್ದಾರೆ ಎಂದು ಈ ಹಿಂದೆ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ಮಾಡಿದ್ದರು.

Comments

Leave a Reply

Your email address will not be published. Required fields are marked *