ಕೊಡಗಿನಲ್ಲಿ 16 ಮಂದಿ ಕೊರೊನಾಗೆ ಬಲಿ- ಕುತೂಹಲ ಹುಟ್ಟಿಸಿದ ತುರ್ತು ಸಭೆ

ಮಡಿಕೇರಿ: ಕೊಡಗು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಯಲ್ಲಿ 16 ಸೋಂಕಿತರು ಮೃತಪಟ್ಟಿದ್ದಾರೆ.

16 ಸೋಂಕಿತರು ಮೃತಟ್ಟಿರುವುದನ್ನು ಸ್ವತಃ ಜಿಲ್ಲಾಡಳಿತವೇ ಸ್ಪಷ್ಟಪಡಿಸುತ್ತಿದೆ. ಆದರೂ 16 ಸೋಂಕಿತರು ಮೃತಪಟ್ಟಿದ್ದಾದಾದರೂ ಯಾಕೆ ಎನ್ನುವುದನ್ನು ಮಾತ್ರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಡೀನ್ ಆಗಲಿ, ಸರ್ಜನ್ ಆಗಲಿ ಅಥವಾ ಜಿಲ್ಲಾಡಳಿತವಾಗಲಿ ಸ್ಪಷ್ಟಪಡಿಸುತ್ತಿಲ್ಲ.

ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಮೃತ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ನಾಲ್ವರು ವೈದ್ಯರನ್ನು ತುರ್ತು ಸಭೆ ಕರೆದಿದ್ದಾರೆ. ಚಿಕಿತ್ಸೆ ನೀಡುತ್ತಿದ್ದ ವೈದ್ಯರನ್ನು ತುರ್ತು ಸಭೆ ಕರೆದಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ, ಮೃತರೆಲ್ಲರೂ ತಡವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಕಳೆದ 24 ಗಂಟೆಯಲ್ಲಿ 16 ಸೋಂಕಿತರು ಮೃತಪಟ್ಟಿದ್ದಾರೆ ಎನ್ನುತ್ತಿದ್ದಾರೆ.

ಕೊಡಗಿನಲ್ಲಿ ಕಳೆದ ಎರಡು ವಾರಗಳಿಂದ ಸೋಂಕಿತರು ಸಂಖ್ಯೆ ಜಾಸ್ತಿಯಾಗುತ್ತಿದೆ. ಜೊತೆಗೆ ಸೋಂಕಿನಿಂದ ಸಾವಿನ ಸಂಖ್ಯೆ ಕೂಡ ಹೆಚ್ಚಿದೆಯಾದರೂ, ಐದರಿಂದ ಆರು ಸೋಂಕಿತರು ಸಾವನ್ನಪ್ಪುತ್ತಿದ್ದರು. ಈಗ ಕಳೆದ 24 ಗಂಟೆಯಲ್ಲಿ 16 ಜನರು ಸಾವನ್ನಪ್ಪಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

Comments

Leave a Reply

Your email address will not be published. Required fields are marked *